
ನವದೆಹಲಿ: ಉಚ್ಚ ನ್ಯಾಯಾಲಯಗಳಲ್ಲಿ ವಿಚಾರಣೆ ಪೂರ್ಣಗೊಂಡ ನಂತರವೂ ತೀರ್ಪು ವಿಳಂಬವಾಗುತ್ತಿರುವ ಬಗ್ಗೆ ಸರ್ವೋಚ್ಚ ನ್ಯಾಯಾಲಯವು ಕಳವಳ ವ್ಯಕ್ತಪಡಿಸಿದೆ. ಉಚ್ಚ ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸರ್ವೋಚ್ಚ ನ್ಯಾಯಾಲಯವು ಮಾರ್ಗಸೂಚಿಗಳನ್ನು ಹೊರಡಿಸಿದೆ. ನ್ಯಾಯಾಂಗದ ಹೊಣೆಗಾರಿಕೆ ಮತ್ತು ಸಬಲೀಕರಣವನ್ನು ಹೆಚ್ಚಿಸಲು ಈ ಪ್ರಕ್ರಿಯೆ ಅಗತ್ಯ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರ ಪೀಠವು ತಿಳಿಸಿದೆ.
೧. ತೀರ್ಪನ್ನು ಕಾಯ್ದಿರಿಸಿದ ನಂತರ, ಉಚ್ಚ ನ್ಯಾಯಾಲಯಗಳು ಗರಿಷ್ಠ ೩ ತಿಂಗಳೊಳಗೆ ಅದನ್ನು ಪ್ರಕಟಿಸಲು ಪ್ರಯತ್ನಿಸಬೇಕು.
೨. ಜಾಮೀನು, ನಿರೀಕ್ಷಣಾ ಜಾಮೀನು ಮತ್ತು ಕ್ರಿಮಿನಲ್ ಅರ್ಜಿಗಳ ತೀರ್ಪುಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು.
೩. ತೀರ್ಪು ನೀಡಲು ೩ ತಿಂಗಳು ಕಳೆದರೆ, ರಿಜಿಸ್ಟ್ರಾರ್ ಜನರಲ್ ಅವರು ಈ ವಿಷಯವನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಮಂಡಿಸಬೇಕು ಮತ್ತು ಪ್ರಕರಣವನ್ನು ಬೇರೆ ಪೀಠಕ್ಕೆ ಒಪ್ಪಿಸುವ ಬಗ್ಗೆ ಪರಿಗಣಿಸಬೇಕು.
೪. ತೀರ್ಪನ್ನು ಕಾಯ್ದಿರಿಸಿದ ನಂತರ, ಕ್ರಿಮಿನಲ್ ಪ್ರಕರಣಗಳಲ್ಲಿ ೫ ದಿನಗಳೊಳಗೆ ಮತ್ತು ಇತರ ಪ್ರಕರಣಗಳಲ್ಲಿ ೧ ತಿಂಗಳೊಳಗೆ ಅಗತ್ಯ ಸ್ಪಷ್ಟೀಕರಣಗಳನ್ನು ಪಡೆಯಬೇಕು.
೫. ಅನೇಕ ಬಾರಿ ಕೆಲಸದ ಒತ್ತಡದಿಂದಾಗಿ ನ್ಯಾಯಮೂರ್ತಿಗಳಿಗೆ ತೀರ್ಪು ನೀಡಲು ವಿಳಂಬವಾಗುತ್ತದೆ. ಇದನ್ನು ತಡೆಯಲು ಸ್ವಯಂ ಶಿಸ್ತು ಅತ್ಯಗತ್ಯ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ.
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !