ಶಿಯಾ ಮುಸಲ್ಮಾನರಿಂದ ತೋಳಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

ಭೋಪಾಲ್ (ಮಧ್ಯಪ್ರದೇಶ) – ಮಾರ್ಚ್ ೨೧ ರಂದು ದೇಶದಲ್ಲಿ ರಮಜಾನ್ ಈದ್ ಆಚರಿಸಲಾಯಿತು. ಭೋಪಾಲ್ ನಲ್ಲಿ ಈದ್ ನಿಮಿತ್ತ ಶಿಯಾ ಮುಸಲ್ಮಾನರು ಫತೇಗಢ್ ಇಮಾಮಬಾಡಾದಲ್ಲಿ ‘ಕಪ್ಪು ಈದ್’ ಆಚರಿಸಿ, ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯನ್ನು ಖಂಡಿಸಿದರು. ನಮಾಜ್ ಪಠಣದ ನಂತರ ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಘೋಷಣೆಗಳನ್ನು ಕೂಗಲಾಯಿತು. ಜನರು ಕಪ್ಪು ಪಟ್ಟಿಗಳನ್ನು ಧರಿಸಿ ಮತ್ತು ಸಾಮಾನ್ಯ ಬಟ್ಟೆಗಳನ್ನು ಹಾಕಿಕೊಂಡು ಬಂದಿದ್ದರಿಂದ ಅಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿತ್ತು. ಇಲ್ಲಿ ಅಯತೊಲ್ಲಾ ಅಲಿ ಖಮೇನಿ ಅವರ ಭಾವಚಿತ್ರವನ್ನು ಇರಿಸಲಾಗಿತ್ತು. ಮೌಲಾನಾ ರಝಿ-ಉಲ್-ಹಸನ್ ಅವರು ಅಲ್ಲಿ ನೆರೆದಿದ್ದವರಿಗೆ ‘ಅನ್ಯಾಯದ ವಿರುದ್ಧ ಧ್ವನಿ ಎತ್ತಿ’ ಎಂಬ ಸಂದೇಶ ನೀಡಿದರು.
ರಾಜಸ್ಥಾನದಲ್ಲಿ ಕಪ್ಪು ಪಟ್ಟಿ ಧರಿಸಿ ಈದ್ ನಮಾಜ್ ಪಠಣ
ರಾಜಸ್ಥಾನದ ಜೈಪುರ, ಸಿಕರ್, ಅಜಮೇರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸಲ್ಮಾನರು ಕಪ್ಪು ಪಟ್ಟಿ ಧರಿಸಿ ನಮಾಜ್ ಪಠಿಸಿದರು. ಮಸೀದಿಗಳ ಮೇಲೆ ಕಪ್ಪು ಬಾವುಟಗಳನ್ನು ಹಾರಿಸಲಾಗಿತ್ತು. ಈದ್ ದಿನದಂದು ಮುಸಲ್ಮಾನರು ಹೊಸ ಬಟ್ಟೆ ಧರಿಸಿ ಹಬ್ಬ ಆಚರಿಸುತ್ತಾರೆ; ಆದರೆ ಇಲ್ಲಿ ಶಿಯಾ ಮುಸಲ್ಮಾನರು ಇಸ್ರೇಲ್ ಮತ್ತು ಅಮೆರಿಕವನ್ನು ವಿರೋಧಿಸಲು ಹೊಸ ಬಟ್ಟೆಗಳನ್ನು ಧರಿಸಲಿಲ್ಲ. ಮನೆಗಳಲ್ಲಿ ತಯಾರಿಸಲಾಗುವ ಸಾಂಪ್ರದಾಯಿಕ ಖಾದ್ಯಗಳಾದ ಖೀರ್, ಶ್ಯಾವಿಗೆ ಪಾಯಸವನ್ನೂ ತಯಾರಿಸಲಿಲ್ಲ. ಜೈಪುರದ ಸುಭಾಷ್ ಚೌಕ್ ನಲ್ಲಿರುವ ಜಾಮ ಮಸೀದಿಯ ಮೇಲೆ ಕಪ್ಪು ಬಾವುಟಗಳನ್ನು ಹಾರಿಸಲಾಗಿತ್ತು. ಜೈಪುರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಪೊಲೀಸ್ ತಂಡಗಳು ಡ್ರೋನ್ (ಮಾನವರಹಿತ ವಿಮಾನ) ಮೂಲಕ ಕಣ್ಗಾವಲು ಇರಿಸಿದ್ದವು. ಅನೇಕ ಕಡೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದರು.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!