|

ಬೆಂಗಳೂರು – ಫಾಲ್ಗುಣ ಚೈತ್ರ ಪ್ರತಿಪದೆ, ಮಾರ್ಚ್ 19 ಈ ದಿನ ಸಂಪೂರ್ಣ ದೇಶ ಯುಗಾದಿ ಆಚರಿಸುತ್ತಿದೆ. ಸಮಸ್ತ ಹಿಂದೂ ಸಮಾಜಕ್ಕೆ ಈ ದಿನ ಹೊಸವರ್ಷವೂ ಆಗಿದೆ. ಇದರ ನಿಮಿತ್ತ ಬೆಂಗಳೂರಿನ ಪ್ರಸನ್ನ ವೀರಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಯುಗಾದಿ ಆಚರಿಸಲಾಯಿತು. ಈ ಸಂಧರ್ಭದಲ್ಲಿ ಸಮಿತಿಯ ಕಾರ್ಯಕರ್ತರು ಮತ್ತು ಧರ್ಮಪ್ರೇಮಿಗಳು ಉಪಸ್ಥಿತರಿದ್ದರು. ಹಿಂದೂ ಧರ್ಮಶಾಸ್ತ್ರಕ್ಕನುಸಾರ ಎತ್ತರದ ಬ್ರಹ್ಮ ಧ್ವಜವನ್ನು ನಿಲ್ಲಿಸಿ ವಿಧಿವತ್ತಾಗಿ ಪೂಜಿಸಲಾಯಿತು.
ಸದ್ಯ ರಾಜ್ಯದಾದ್ಯಂತ ಬೆಲೆ ಏರಿಕೆ, ಭ್ರಷ್ಟಚಾರ, ಓಲೈಕೆ, ಅಪರಾಧ ಮತ್ತು ಅತ್ಯಾಚಾರ, ಹಿಂದೂ ಸಮಾಜದ ಮೇಲೆ ಆಘಾತದ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಹೇಗೆ ಪ್ರಭು ಶ್ರೀರಾಮನ ಸಮಯದಲ್ಲಿ ಆದರ್ಶ ರಾಜ್ಯಾಡಳಿತವಿತ್ತು, ಅದೇ ರೀತಿಯ ರಾಮರಾಜ್ಯವು ಶೀಘ್ರದಲ್ಲಿ ಸ್ಥಾಪನೆಯಾಗಬೇಕು. ಭಾರತವು ಆದರ್ಶ ರಾಮರಾಜ್ಯದಂತಾಗಬೇಕು ಎಂದು ಪ್ರಭು ಶ್ರೀರಾಮನಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಮಾಡಲಾಯಿತು, ತ್ರೇತಾಯುಗದಲ್ಲಿ ಪ್ರಭು ಶ್ರೀರಾಮನು ಯುಗಾದಿಯಂದು ಅಯೋದ್ಯೆಯಲ್ಲಿ ರಾಮರಾಜ್ಯದ ಸ್ಥಾಪನೆ ಮಾಡಿದಂತೆ, ಪರಾಭವನಾಮ ಸಂವತ್ಸರದಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಗೆ ಸಂಕಲ್ಪ ಮಾಡಲಾಯಿತು. ಅದಕ್ಕಾಗಿ ಎಲ್ಲ ಹಿಂದೂ ಬಾಂಧವರು ಸಂಘಟಿತಭಾವದಿಂದ ಕಾರ್ಯ ಮಾಡಲು ನಿಶ್ಚಯ ಮಾಡಿದರು. ಜೊತೆಗೆ ನೆರೆದಿದ್ದ ಹಿಂದೂ ಸಮಾಜವು ರಾಮರಾಜ್ಯದ ಸ್ಥಾಪನೆಗಾಗಿ ಆವಶ್ಯಕವಿರುವ ಧರ್ಮಜಾಗೃತಿ ಮೂಡಿಸಲು ನಾವು ಇಂದಿನಿಂದ ಪ್ರಯತ್ನಿಸುತ್ತೇವೆ ಎಂದು ಸಂಕಲ್ಪ ಮಾಡಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ