|

ಕಾಠಮಂಡು (ನೇಪಾಳ) – ನೇಪಾಳದ ಕಪಿಲವಸ್ತುವಿನಲ್ಲಿ ಈದ್ ದಿನದಂದು ಮುಸಲ್ಮಾನರ ಗುಂಪೊಂದು ದೇವಸ್ಥಾನದಲ್ಲಿ ಧ್ವನಿವರ್ಧಕದ ಮೂಲಕ ಭಜನೆ ನಡೆಯುತ್ತಿದೆ ಎಂಬ ಕಾರಣಕ್ಕೆ ದೇವಸ್ಥಾನದ ಮೇಲೆ ದಾಳಿ ಮಾಡಿದೆ. ಮುಸಲ್ಮಾನರು ದೇವಸ್ಥಾನದ ಆವರಣಕ್ಕೆ ನುಗ್ಗಿ ಧ್ವಂಸಗೊಳಿಸಿದ್ದಾರೆ, ಧ್ವನಿವರ್ಧಕವನ್ನು ಒಡೆದು ಹಾಕಿದ್ದಾರೆ ಮತ್ತು ಅರ್ಚಕರಿಗೂ ಥಳಿಸಿದ್ದಾರೆ. ಈ ಘಟನೆಯು ಮಾರ್ಚ್ ೨೧ ರಂದು ಬೆಳಿಗ್ಗೆ ಮಹಾರಾಜಗಂಜ್ ಪ್ರದೇಶದ ಬರಗದಿ ಘಾಟ್ ಸಮೀಪದ ಕಾಳಿ ದೇವಸ್ಥಾನದಲ್ಲಿ ನಡೆದಿದೆ. ಇಲ್ಲಿ ಚೈತ್ರ ನವರಾತ್ರಿಯ ಅಂಗವಾಗಿ ಪೂಜೆ ಮತ್ತು ಭಜನೆ-ಕೀರ್ತನೆಗಳು ನಡೆಯುತ್ತಿದ್ದವು, ಅದೇ ಸಮಯದಲ್ಲಿ ಮುಸಲ್ಮಾನರು ನಮಾಜ್ ಮಾಡುತ್ತಿದ್ದರು. ಘಟನೆಯ ಸುದ್ದಿ ಹರಡುತ್ತಿದ್ದಂತೆ ದೊಡ್ಡ ಸಂಖ್ಯೆಯಲ್ಲಿ ಜನರು ಪ್ರತಿಭಟನೆಗಾಗಿ ರಸ್ತೆಗಿಳಿದರು ಮತ್ತು ಹಿಂಸಾಚಾರ ಸಂಭವಿಸಿತು.
ಅನೇಕ ಕಡೆ ಸಂಚಾರ ನಿಷೇಧ (ಕರ್ಫ್ಯೂ)
ಬುಟಹಾನಿಯಾ ಪ್ರದೇಶದಲ್ಲಿ ಜನಸಮೂಹವು ಸೇರಿ ಆರೋಪಿ ಮುಸಲ್ಮಾನರನ್ನು ಬಂಧಿಸಬೇಕೆಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಲಾರಂಭಿಸಿತು. ಕೆಲವು ಕಡೆಗಳಲ್ಲಿ ಟಯರ್ ಸುಟ್ಟು ರಸ್ತೆ ತಡೆ ನಡೆಸಲಾಯಿತು, ಇದರಿಂದ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿತು. ಮಾಹಿತಿ ತಿಳಿಯುತ್ತಿದ್ದಂತೆ ಆಡಳಿತ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿ ಜನಸಮೂಹವನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಪರಿಸ್ಥಿತಿ ಹತೋಟಿಗೆ ಬಾರದಿದ್ದಾಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು ಮತ್ತು ಅಶ್ರುವಾಯು ಸಿಡಿಸಿದರು. ಆದರೂ ಜನಸಮೂಹವು ಆಕ್ರಮಣಕಾರಿಯಾದಾಗ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು. ಈ ಘಟನೆಯಲ್ಲಿ ಪೊಲೀಸರು ಮತ್ತು ಸಾರ್ವಜನಿಕರು ಸೇರಿದಂತೆ ಒಟ್ಟು ೮ ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಬರಗದಿ, ಮಹಾರಾಜಗಂಜ್ ಮಾರುಕಟ್ಟೆ, ಹರದೌನಾ ಮತ್ತು ಬಹಾದ್ದೂರಗಂಜ್ ಪ್ರದೇಶಗಳಲ್ಲಿ ಸಂಚಾರ ನಿಷೇಧ ಹೇರಲಾಗಿದೆ.
|
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು