
ಅಲಿಗಢ (ಉತ್ತರ ಪ್ರದೇಶ) – ಅತ್ಯಾಚಾರ ಸಂತ್ರಸ್ತೆಯಿಂದ ಅಶ್ಲೀಲ ಚಿತ್ರಗಳನ್ನು ಕೇಳಿದ ಮತ್ತು ಅಕ್ರಮ ಸಂಬಂಧಕ್ಕಾಗಿ ಒತ್ತಡ ಹೇರಿದ ಆರೋಪದ ಮೇಲೆ ಇಲ್ಲಿನ ಖುರೇಶಿ ಪೊಲೀಸ್ ಠಾಣೆಯ ನಗಲಾ ಪಟ್ವಾರಿ ಚೌಕಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮುಖ್ಯ ಪೇದೆ (ಹೆಡ್ ಕಾನ್ಸ್ಟೇಬಲ್) ಇಮ್ರಾನ್ ಖಾನ್ನನ್ನು ಪೊಲೀಸರು ಬಂಧಿಸಿದ್ದಾರೆ.
Aligarh: Police Constable Imran Khan arrested for seeking sexual favors from a rape victim.
This level of depravity from a law protector is sickening.
When those meant to protect become predators, public anger is inevitable.
Many are now calling for the harshest possible… pic.twitter.com/fy7Ph8kUEH
— Sanatan Prabhat (@SanatanPrabhat) March 24, 2026
ಜಮಾಲ್ಪುರದ ಸಂತ್ರಸ್ತೆಯೊಬ್ಬರು ಮದುವೆಯ ಆಮಿಷವೊಡ್ಡಿ ಅತ್ಯಾಚಾರ ಎಸಗಿದ ಜೀಶನ್ ಎಂಬ ಯುವಕನ ವಿರುದ್ಧ ದೂರು ನೀಡಿದ್ದರು. ತನಿಖೆಯ ನೆಪದಲ್ಲಿ ಇಮ್ರಾನ್ ಸಂತ್ರಸ್ತೆಯನ್ನು ಪೊಲೀಸ್ ಚೌಕಿಗೆ ಕರೆಸಿಕೊಂಡಿದ್ದ ಮತ್ತು ಆನಂತರ ವಾಟ್ಸಾಪ್ ಕರೆ ಮೂಲಕ ಆಕೆಗೆ ಕಿರುಕುಳ ನೀಡಲು ಆರಂಭಿಸಿದ್ದ. ಪ್ರಕರಣದಲ್ಲಿ ಸಹಾಯ ಮಾಡುವುದಾಗಿ ಮತ್ತು ಈದ್ ಹಬ್ಬಕ್ಕೆ ಬಟ್ಟೆ ಕೊಡಿಸುವುದಾಗಿ ಆಮಿಷವೊಡ್ಡಿ ಆಕೆಯನ್ನು ತನ್ನ ಕೋಣೆಗೆ ಬರುವಂತೆ ಒತ್ತಾಯಿಸಿದ್ದ. ಸಂತ್ರಸ್ತೆ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಿದರೆ ಮಾತ್ರ ತಾನು ಜೀಶನ್ನನ್ನು ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಆತ ಶರತ್ತು ವಿಧಿಸಿದ್ದ. ಅಲ್ಲದೆ ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ಆಕೆಯನ್ನೇ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದ. ಸಂತ್ರಸ್ತೆ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ ನಂತರ ಇಮ್ರಾನ್ನನ್ನು ಬಂಧಿಸಲಾಗಿದೆ.
ಸಂಪಾದಕೀಯ ನಿಲುವುಇಂತಹವರಿಗೆ ಶರಿಯತ್ ಕಾನೂನಿನಂತೆ ಕೈ-ಕಾಲು ಕತ್ತರಿಸುವ ಅಥವಾ ಸಾರ್ವಜನಿಕವಾಗಿ ಕಲ್ಲು ಹೊಡೆದು ಕೊಲ್ಲುವ ಶಿಕ್ಷೆ ನೀಡಬೇಕೆಂದು ಯಾರಾದರೂ ಒತ್ತಾಯಿಸಿದರೆ, ಅದರಲ್ಲಿ ಆಶ್ಚರ್ಯಪಡಬೇಕಿಲ್ಲ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!