ಭಾರತವು ಪಾಕಿಸ್ತಾನದಂತೆ ದಲ್ಲಾಳಿ ದೇಶವಲ್ಲ! – ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ

ಸಂಸತ್ತಿನಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ, ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದಂತೆ ಭಾರತವು ಮಧ್ಯಸ್ಥಿಕೆ ವಹಿಸಬೇಕೆಂದು ಒತ್ತಾಯಿಸಿದ ವಿರೋಧ ಪಕ್ಷದ ನಾಯಕರಿಗೆ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ ಅವರಿಂದ ತಕ್ಕ ಪ್ರತ್ಯುತ್ತರ !

ನವದೆಹಲಿ – ಅಮೆರಿಕ ಮತ್ತು ಇಸ್ರೇಲ್ ವಿರುದ್ಧ ಇರಾನ್ ನಡುವಿನ ಯುದ್ಧದ ಹಿನ್ನೆಲೆಯಲ್ಲಿ ಮಾರ್ಚ್ 25 ರಂದು ಸಂಸತ್ತಿನಲ್ಲಿ ಸರ್ವಪಕ್ಷ ಸಭೆಯನ್ನು ಆಯೋಜಿಸಲಾಗಿತ್ತು. ಆ ಸಮಯದಲ್ಲಿ, “ಈ ಯುದ್ಧದಲ್ಲಿ ಪಾಕಿಸ್ತಾನವು ಮಧ್ಯಸ್ಥಿಕೆಯ ಪಾತ್ರವನ್ನು ನಿರ್ವಹಿಸುತ್ತಿದೆ, ಆದರೆ ಭಾರತವು ಕೇವಲ ಮೂಕಪ್ರೇಕ್ಷಕನಾಗಿ ಕುಳಿತಿದೆ” ಎಂದು ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್ ಹೇಳಿಕೆ ನೀಡಿದರು. (ಪಾಕಿಸ್ತಾನವನ್ನು ಓಲೈಸುವವರನ್ನು ಪಾಕಿಸ್ತಾನಕ್ಕೆ ಕಳುಹಿಸುವ ಸಮಯ ಬಂದಿದೆ.- ಸಂಪಾದಕರು) ಇದಕ್ಕೆ ಉತ್ತರಿಸಿದ ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ “ಭಾರತವು ಪಾಕಿಸ್ತಾನದಂತೆ ದಲ್ಲಾಳಿ ದೇಶವಲ್ಲ. ನಾವು ಯಾರ ಪರವಾಗಿಯೂ ಮಧ್ಯಸ್ಥಿಕೆ ವಹಿಸುವುದಿಲ್ಲ” ಎಂದು ಖಡಾಖಂಡಿತವಾಗಿ ಉತ್ತರಿಸಿದರು.

ಭಾರತ ಸರಕಾರವು ಸುಮ್ಮನೆ ಕುಳಿತಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಸರಕಾರವು, “ಪರಿಸ್ಥಿತಿಯ ಕುರಿತು ಸರಕಾರ ನಿರಂತರವಾಗಿ ಪ್ರತಿಕ್ರಿಯಿಸುತ್ತಿದೆ” ಎಂದು ತಿಳಿಸಿದೆ. ಆದರೆ, ಸರಕಾರದ ಉತ್ತರವು ತೃಪ್ತಿಕರವಾಗಿಲ್ಲ ಎಂದು ಹೇಳಿದ ವಿರೋಧ ಪಕ್ಷಗಳು, ಈ ವಿಷಯದ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆ ನಡೆಸಬೇಕೆಂದು ಒತ್ತಾಯಿಸಿದವು.

ಪೂರೈಕೆ ಸರಪಳಿ ಮುಂದುವರಿಯುತ್ತಿರುವುದು ಭಾರತದ ರಾಜತಾಂತ್ರಿಕ ಯಶಸ್ಸು!

ಕೊಲ್ಲಿದೇಶಗಳಲ್ಲಿ ಸಂಘರ್ಷವಿದ್ದರೂ ಭಾರತದ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿದೆ. ದೇಶದಲ್ಲಿ ಕಚ್ಚಾ ತೈಲ, ಎಲ್.ಪಿ.ಜಿ (LPG) ಮತ್ತು ಇತರ ಅಗತ್ಯ ವಸ್ತುಗಳ ಪೂರೈಕೆ ಸಾಕಷ್ಟಿದೆ. ಭಾರತದ ಬಲಿಷ್ಠ ಸಂಸ್ಕರಣಾ ಸಾಮರ್ಥ್ಯದಿಂದಾಗಿ ಪೂರೈಕೆಯ ಮೇಲೆ ಯಾವುದೇ ಪರಿಣಾಮವಾಗಿಲ್ಲ. ಇದುವರೆಗೆ 4 ಹಡಗುಗಳು ಬಂದಿವೆ ಮತ್ತು ಮುಂದೆಯೂ ಪೂರೈಕೆ ಮುಂದುವರಿಯುವ ನಿರೀಕ್ಷೆಯಿದೆ. ಇರಾನ್ 5 ದಿನಗಳ ನಂತರ ಪೂರೈಕೆ ಮಾರ್ಗವನ್ನು ಮತ್ತೆ ತೆರೆದಿದೆ. ಭಾರತವು ಎಲ್ಲಾ ದೇಶಗಳೊಂದಿಗೆ ಸಂಪರ್ಕದಲ್ಲಿದೆ ಮತ್ತು ಸಕ್ರಿಯ ರಾಜತಾಂತ್ರಿಕತೆಯಲ್ಲಿ ತೊಡಗಿದೆ. ಪೂರೈಕೆ ಸರಪಳಿಯನ್ನು ಸುಸ್ಥಿತಿಯಲ್ಲಿಟ್ಟಿರುವುದು ಭಾರತದ ರಾಜತಾಂತ್ರಿಕ ಯಶಸ್ಸಾಗಿದೆ. ವಿದೇಶದಲ್ಲಿರುವ ಭಾರತೀಯರ ಸುರಕ್ಷತೆಗಾಗಿ ರಾಯಭಾರ ಕಚೇರಿಗಳು ಸಕ್ರಿಯವಾಗಿವೆ ಮತ್ತು ಅಗತ್ಯವಿದ್ದರೆ ಭಾರತೀಯರನ್ನು ಸ್ಥಳಾಂತರಿಸಲು ಸಂಪೂರ್ಣ ಸಿದ್ಧತೆಯನ್ನೂ ಮಾಡಿಕೊಳ್ಳಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಎರಡು ಗಂಟೆಗಳ ಸಭೆಯಲ್ಲಿ ಕೊಲ್ಲಿ ರಾಷ್ಟ್ರಗಳ ಪರಿಸ್ಥಿತಿ ಮತ್ತು ದೇಶದಲ್ಲಿ ತೈಲ ಹಾಗೂ ಅನಿಲ ಲಭ್ಯತೆಯ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಹಲವು ಕೇಂದ್ರ ಸಚಿವರು ಉಪಸ್ಥಿತರಿದ್ದರು, ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಗೈರುಹಾಜರಾಗಿದ್ದರು. ತೃಣಮೂಲ ಕಾಂಗ್ರೆಸ್ ಈ ಸಭೆಯಲ್ಲಿ ಭಾಗವಹಿಸಿರಲಿಲ್ಲ