ಮೌಲಾನಾ (ಇಸ್ಲಾಮಿನ ಧಾರ್ಮಿಕ ಮುಖಂಡ) ಸೇರಿದಂತೆ ೧೨ ಜನರ ವಿರುದ್ಧ ಪ್ರಕರಣ ದಾಖಲು !

ಅಹಿಲ್ಯಾನಗರ – ಶ್ರೀರಾಮಪುರ ನಗರದ ಗೊಂದವಣಿ ಪ್ರದೇಶದಿಂದ ಶ್ರೀರಾಮ ಮಂದಿರದತ್ತ ಹೊರಟಿದ್ದ ಭವ್ಯ ಶೋಭಾಯಾತ್ರೆಯ ಮೇಲೆ ಏಕಾಏಕಿ ಕಲ್ಲು ತೂರಾಟ ನಡೆಸಲಾಗಿದೆ. ಸೈಯದ್ ಬಾಬಾ ಚೌಕ್ನಲ್ಲಿರುವ ದರ್ಗಾ (ಮುಸ್ಲಿಮರ ಕಥಿತ ಸಿದ್ಧಪುರುಷರ ಸಮಾಧಿ ಸ್ಥಳ)ದ ಬಳಿ ಈ ಘಟನೆ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಒಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡ ಓರ್ವ ವ್ಯಕ್ತಿಯ ಒಂದು ಕಣ್ಣು ಶಾಶ್ವತವಾಗಿ ಹಾನಿಗೊಳಗಾಗಿದೆ. ಪೊಲೀಸರು ತಕ್ಷಣ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಸದ್ಯ ಶ್ರೀರಾಮಪುರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಈ ಸಂಬಂಧ ಸುಯೋಗ್ ಝಿರಾಂಗೆ ಅವರು ಶ್ರೀರಾಮಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಮಸೀದಿಯಲ್ಲಿದ್ದ ಮೌಲಾನಾ ಮತ್ತು ಇತರ ೧೦ ರಿಂದ ೧೨ ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಲ್ಲು ತೂರಾಟ ನಡೆಸಿದವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಘಟನೆಯ ನಂತರ ಪೊಲೀಸರು ನಾಗರಿಕರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಬೇಡಿಕೆಗಾಗಿ ಹಾಗೂ ಘಟನೆಯನ್ನು ಖಂಡಿಸಿ ಮಾರ್ಚ್ ೨೭ ರಂದು ಸಮಸ್ತ ಹಿಂದೂ ಸಮಾಜವು ಒಗ್ಗೂಡಿತ್ತು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ