|

ಗೋರಖಪುರ (ಉತ್ತರಪ್ರದೇಶ) – ಇಲ್ಲಿನ ಆವಾಸ್ ವಿಕಾಸ್ ಕಾಲೋನಿ ಸಮೀಪವಿರುವ ಗೋಡಧೋಯಿಯಾ ಸೇತುವೆಯ ಪಕ್ಕದಲ್ಲಿ ಸರಕಾರಿ ಭೂಮಿಯನ್ನು ಅತಿಕ್ರಮಿಸಿ ನಿರ್ಮಿಸಲಾಗಿದ್ದ ದರ್ಗಾವನ್ನು ಮಾರ್ಚ್ 26 ರಂದು ತೆರವುಗೊಳಿಸಲಾಯಿತು. ಪ್ರದೇಶದ ಕಾಲುವೆ ಅಗಲೀಕರಣಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ. ಈ ದರ್ಗಾವನ್ನು ಹಜರತ್ ಬಾಬಾ ಜಾಫರ್ ಅಲಿ ಶಾ ‘ಮಾಸೂಮ್’ ಎಂದು ಕರೆಯಲಾಗುತ್ತಿತ್ತು. ಸಾರ್ವಜನಿಕ ಲೋಕೋಪಯೋಗಿ ಇಲಾಖೆ ನಡೆಸಿದ ಈ ಕಾರ್ಯಾಚರಣೆಯ ಸಮಯದಲ್ಲಿ ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಈ ವೇಳೆ ಮುಸಲ್ಮಾನರು ಕಾರ್ಯಾಚರಣೆಗೆ ಸ್ವಲ್ಪ ಮಟ್ಟಿಗೆ ವಿರೋಧ ವ್ಯಕ್ತಪಡಿಸಿದರಾದರೂ, ಆಡಳಿತ ಮಂಡಳಿಯ ಕಠಿಣ ನಿಲುವಿನ ಮುಂದೆ ಅವರ ಆಟ ನಡೆಯಲಿಲ್ಲ. ತದನಂತರ ಮುಸಲ್ಮಾನರು ಶಾಂತಿಯುತವಾಗಿ ಕಾರ್ಯಾಚರಣೆ ನಡೆಸಲು ಅವಕಾಶ ನೀಡಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದವರಲ್ಲಿ ಮುಸಲ್ಮಾನ ಮಹಿಳೆಯರೂ ಸೇರಿದ್ದರು. ಅನೇಕ ವರ್ಷಗಳಿಂದ ಇಲ್ಲಿಗೆ ಬಂದು ಭಕ್ತಿಯಿಂದ ಹರಕೆಗಳನ್ನು ಸಲ್ಲಿಸುತ್ತಿದ್ದೆವು ಎಂದು ಅವರು ಹೇಳಿದರು. ದರ್ಗಾವನ್ನು ಕೆಡವುದನ್ನು ಕಂಡು ಅನೇಕರು ಭಾವುಕರಾದರು. (ಈಗ ಈ ದೃಶ್ಯಗಳನ್ನು ಬಂಡವಾಳ ಮಾಡಿಕೊಂಡು ‘ಬಿಬಿಸಿ’ ಮತ್ತು ‘ನ್ಯೂಯಾರ್ಕ್ ಟೈಮ್ಸ್’ ನಂತಹ ಹಿಂದೂ ವಿರೋಧಿ ಮಾಧ್ಯಮಗಳು ಆಡಳಿತ ಮಂಡಳಿಯನ್ನು ವಿರೋಧಿಸಲು ಆರಂಭಿಸಿದರೆ ಆಶ್ಚರ್ಯಪಡಬೇಕಿಲ್ಲ! – ಸಂಪಾದಕರು). ಈ ಸಂದರ್ಭದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಸಂಪಾದಕೀಯ ನಿಲುವು
|
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ