|

ಮುಂಬಯಿ – ಇಲ್ಲಿನ ಮಾಲವಣಿ ಪರಿಸರದಲ್ಲಿ ಶ್ರೀರಾಮನವಮಿಯ ಶೋಭಾಯಾತ್ರೆಯ ಪೂರ್ವಸಿದ್ಧತೆಗಾಗಿ ರಾಮಭಕ್ತರು ಕೇಸರಿ ಧ್ವಜ ಮತ್ತು ಪತಾಕೆಗಳನ್ನು ಹಚ್ಚುತ್ತಿದ್ದರು. ಮಸೀದಿಯ ಮುಂಭಾಗದ ರಸ್ತೆಗೆ ರಾಮಭಕ್ತರು ಬಂದಾಗ ಅಲ್ಲಿನ ಮುಸ್ಲಿಮರು ಅವರನ್ನು ವಿರೋಧಿಸಿದರು. ಒಬ್ಬ ಮುಸ್ಲಿಂ ಮಹಿಳೆಯು ರಾಮಭಕ್ತರ ಮೇಲೆ ಹಲ್ಲೆ ನಡೆಸಿದಳು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ಘಟನೆಯು ಪೂರ್ವನಿಯೋಜಿತವಾಗಿತ್ತು ಎಂದು ಹೇಳಲಾಗುತ್ತಿದೆ; ಏಕೆಂದರೆ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ದೊಡ್ಡ ಸಂಖ್ಯೆಯಲ್ಲಿ ಮತಾಂದ ಮುಸ್ಲಿಮರು ಅಲ್ಲಿ ಜಮಾಯಿಸಿ ರಾಮಭಕ್ತರಿಗೆ ಬೆದರಿಕೆ ಹಾಕತೊಡಗಿದರು.
‘ಸಕಲ ಹಿಂದೂ ಸಮಾಜ’ವು ಮತಾಂಧರ ವಿರುದ್ಧ ಲಿಖಿತ ದೂರನ್ನು ದಾಖಲಿಸಿದ್ದು, ಮಾರಣಾಂತಿಕ ಹಲ್ಲೆ ಮತ್ತು ದಂಗೆ ಎಬ್ಬಿಸುವ ಸಂಚು ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ. ಈ ಶೋಭಾಯಾತ್ರೆಯು ಸವೇರಾ ಚೌಕಕ್ಕೆ ಬಂದಾಗ ಮತಾಂಧರು ಶ್ರೀರಾಮನ ಮೂರ್ತಿಯ ಮೇಲೆ ಕಲ್ಲು ತೂರಾಟ ನಡೆಸಿದರು. ಆಗ ಅಲ್ಲಿನ ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಇಡೀ ಪರಿಸರದಲ್ಲಿ ಬ್ಯಾರಿಕೇಡ್ಗಳನ್ನು ಹಾಕಿ ಬಿಗಿ ಬಂದೋಬಸ್ತ್ ಏರ್ಪಡಿಸಿದರು.
ಮಾಲವಣಿ ಪೊಲೀಸ್ ಠಾಣೆಯು ಈ ದಾಳಿ ನಡೆದ ಪ್ರದೇಶಕ್ಕೆ ತುಂಬಾ ಹತ್ತಿರದಲ್ಲಿದೆ. ಸಂಬಂಧಪಟ್ಟವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ. (ಪೊಲೀಸ್ ಠಾಣೆ ಹತ್ತಿರದಲ್ಲಿದ್ದರೂ ಸಹ ಮತಾಂಧರು ಇಂತಹ ಉದ್ಧಟತನ ತೋರುತ್ತಾರೆ ಎಂದರೆ, ಇದು ಪೊಲೀಸ್ ಆಡಳಿತದ ವೈಫಲ್ಯವೇ ಸರಿ! – ಸಂಪಾದಕರು).
|
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ