|
(ಎ.ಐ.ಯು.ಡಿ.ಎಫ್. ಎಂದರೆ ಆಲ್ ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್)
(‘ಮಿಯಾ’ ಎಂದರೆ ಬಾಂಗ್ಲಾದೇಶಿ ಮುಸ್ಲಿಂ)

ದಿಸ್ಪುರ್ (ಅಸ್ಸಾಂ) – ಅಸ್ಸಾಂನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.ಐ.ಯು.ಡಿ.ಎಫ್. ಮುಖ್ಯಸ್ಥ ಬದ್ರುದ್ದೀನ್ ಅಜ್ಮಲ್ ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ. ಅವರು, ‘ಚುನಾವಣೆಯ ನಂತರ ಅಸ್ಸಾಂನಲ್ಲಿ ‘ಮಿಯಾ’ (ಬಾಂಗ್ಲಾದೇಶಿ ಮುಸ್ಲಿಂ) ಸಮುದಾಯದ ಪ್ರಭಾವ ಹೆಚ್ಚಾಗಲಿದೆ’, ಎಂದು ಹೇಳಿದ್ದಾರೆ.
ಈ ಹಿಂದೆ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಅವರು, ಕಳೆದ ೫ ವರ್ಷಗಳಲ್ಲಿ ತಮ್ಮ ಸರಕಾರವು ಬಾಂಗ್ಲಾದೇಶಿ ಮಿಯಾಗಳ ಕೈಕಾಲು ಮುರಿದಿದೆ ಮತ್ತು ಮುಂದಿನ ೫ ವರ್ಷಗಳಲ್ಲಿ ಅವರ ಬೆನ್ನೆಲುಬನ್ನೇ ಮುರಿಯಲಾಗುವುದು ಎಂದು ಹೇಳಿದ್ದರು. ಮುಖ್ಯಮಂತ್ರಿಗಳ ಈ ಹೇಳಿಕೆಯ ಹಿನ್ನೆಲೆಯಲ್ಲಿ ಅಜ್ಮಲ್ ಅವರು ಮೇಲಿನಂತೆ ಹೇಳಿಕೆ ನೀಡಿದ್ದು, ಅಸ್ಸಾಂನಲ್ಲಿ ಬಾಂಗ್ಲಾದೇಶಿ ಮುಸ್ಲಿಮರಿಗೆ ಮುಕ್ತ ಅವಕಾಶ ನೀಡುವ ತಮ್ಮ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ.
ಅಜ್ಮಲ್ ಮುಂದೆ ಮಾತನಾಡಿ, ಚುನಾವಣಾ ಫಲಿತಾಂಶ ಬಂದ ನಂತರ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಲಿದೆ. ಮುಂದಿನ ದಿನಗಳಲ್ಲಿ ಮಿಯಾ ಸಮುದಾಯವು ಅಸ್ಸಾಂನಲ್ಲಿ ಮೇಲುಗೈ ಸಾಧಿಸಲಿದೆ ಮತ್ತು ಅವರದೇ ದಾದಾಗಿರಿ ನಡೆಯಲಿದೆ. ಹಾಗೆಯೇ ಹಿಮಂತ ಸರಮಾ ಅವರ ಪ್ರಭಾವ ಕೊನೆಗೊಳ್ಳುವುದು ಮತ್ತು ಅವರು ಅಸ್ಸಾಂ ಬಿಟ್ಟು ನವದೆಹಲಿಗೆ ಹೋಗಬೇಕಾಗುತ್ತದೆ ಎಂದು ಹೇಳಿದ್ದಾರೆ.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ