
ಮುಂಬಯಿ – ಮಹಾರಾಷ್ಟ್ರದಲ್ಲಿ ನಕ್ಸಲೈಟ್ ಬಂಡುಕೋರರು ಇದುವರೆಗೆ ೮೫೩ ಜನರನ್ನು ಹತ್ಯೆ ಮಾಡಿದ್ದಾರೆ. ಇದರಲ್ಲಿ ೨೪೪ ಪೊಲೀಸರು ಮತ್ತು ೬೦೯ ನಾಗರಿಕರು ಸೇರಿದ್ದಾರೆ ಎಂದು ಮಹಾರಾಷ್ಟ್ರ ರಾಜ್ಯದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮಾಹಿತಿ ನೀಡಿದ್ದಾರೆ. ಮಾರ್ಚ್ ೩೦ ರಂದು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಉಪಸ್ಥಿತಿಯಲ್ಲಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಅರ್ಧವಾರ್ಷಿಕ ಸಭೆ ನಡೆಯಿತು. ಸಭೆಯ ನಂತರ ಮುಖ್ಯಮಂತ್ರಿಯವರು ಮಾಧ್ಯಮಗಳಿಗೆ ಮೇಲಿನ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ನಕ್ಸಲ್ ವಿರುದ್ಧ ಹೋರಾಟ ನಡೆಸುತ್ತಿರುವ ‘ಸಿ-೬೦’ (ಮಹಾರಾಷ್ಟ್ರ ಪೊಲೀಸರ ಒಂದು ವಿಶೇಷ ಕಮಾಂಡೋ ತಂಡ) ಸೈನಿಕರ ಪಡೆಯಲ್ಲಿ ಕನಿಷ್ಠ ೩ ವರ್ಷಗಳ ಕಾಲ ಸೇವೆ ಸಲ್ಲಿಸಿದ ಸೈನಿಕರನ್ನು ‘ಸಿ-೬೦’ ಪದಕ ನೀಡಿ ಗೌರವಿಸಲು ನಿರ್ಧರಿಸಲಾಯಿತು. ಈ ವೇಳೆ ಮಾತನಾಡಿದ ದೇವೇಂದ್ರ ಫಡ್ನವಿಸ್ ಅವರು, “ನಕ್ಸಲ್ಗಳ ವಿರುದ್ಧದ ಹೋರಾಟದಲ್ಲಿ ಮಹಾರಾಷ್ಟ್ರ ಪೊಲೀಸರು ನಿರ್ಣಾಯಕ ಯಶಸ್ಸನ್ನು ಸಾಧಿಸಿದ್ದಾರೆ. ರಾಜ್ಯದಲ್ಲಿ ಮಾವೋವಾದದ ಚಳುವಳಿಯು ಅತಿ ಕಡಿಮೆ ಮಟ್ಟಕ್ಕೆ ತಲುಪಿದೆ. ಮತ್ತೆ ಇದರ ಪುನರುಜ್ಜೀವನವನ್ನು ತಡೆಯುವುದು ಮುಂದಿರುವ ದೊಡ್ಡ ಸವಾಲಾಗಿದೆ” ಎಂದು ಹೇಳಿದರು.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !