ಮದರಸಾಗಳು ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯ ನಿಧಿಯನ್ನು ಕಬಳಿಸಿವೆ!

ಲಕ್ಷ್ಮಣಪುರಿ (ಉತ್ತರ ಪ್ರದೇಶ) – ಉತ್ತರ ಪ್ರದೇಶದ ಯೋಗಿ ಸರಕಾರವು ಮದರಸಾಗಳಲ್ಲಿನ ಅಕ್ರಮಗಳನ್ನು ತಡೆಯಲು ಕಠಿಣ ಕ್ರಮಗಳನ್ನು ಕೈಗೊಂಡಿದೆ. ರಾಜ್ಯದ ೫೫೮ ಮದರಸಾಗಳಲ್ಲಿ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಮದರಸಾಗಳು ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದ ಯೋಜನೆಯ ನಿಧಿಯನ್ನು ದುರುಪಯೋಗಪಡಿಸಿಕೊಂಡಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಾಹ್ನದ ಬಿಸಿಯೂಟ ಪ್ರಾಧಿಕಾರದ ನಿರ್ದೇಶಕಿ ಮೋನಿಕಾ ರಾಣಿ ಅವರು ತನಿಖೆಗೆ ಆದೇಶಿಸಿದ್ದಾರೆ.
ಅಖಿಲ ಭಾರತ ಪಸಮಾಂದಾ ಸಮಾಜ ಮಂಚ್ ನೀಡಿದ ದೂರಿನ ನಂತರ ಈ ಪ್ರಕರಣವು ಬಯಲಾಗಿದೆ. ಮದರಸಾಗಳಲ್ಲಿ ದಾಖಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಗೆ ತೋರಿಸಲಾಗುತ್ತಿದೆ ಎಂದು ಈ ಮಂಚ್ ಸರಕಾರಕ್ಕೆ ತಿಳಿಸಿದೆ. ಅಲ್ಲದೆ, ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳು ಮತ್ತು ನಿಧಿ ತಲುಪುತ್ತಿಲ್ಲ. ಸರಕಾರಿ ನಿಧಿಯನ್ನು ದುರ್ಬಳಕೆ ಮಾಡಿಕೊಂಡು ವೈಯಕ್ತಿಕ ಲಾಭಕ್ಕಾಗಿ ಬಳಸಲಾಗುತ್ತಿದೆ. ಈ ದೂರನ್ನು ಗಮನಕ್ಕೆ ತೆಗೆದುಕೊಂಡು ಸರಕಾರವು ತನಿಖೆಗೆ ಆದೇಶ ನೀಡಿದೆ. ಸರಕಾರಿ ಅಧಿಕಾರಿಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ, ಹಾಗೆಯೇ ನಿಧಿಯ ಹಂಚಿಕೆ ಮತ್ತು ಪ್ರತ್ಯಕ್ಷವಾಗಿ ಮಧ್ಯಾಹ್ನದ ಬಿಸಿಯೂಟ ಸೇವಿಸುವ ವಿದ್ಯಾರ್ಥಿಗಳ ಸಂಖ್ಯೆಯ ಹೊಂದಾಣಿಕೆಯನ್ನು ಪರಿಶೀಲಿಸಲಾಗುತ್ತದೆ. ಯೋಗಿ ಸರಕಾರವು ಕಳೆದ ಕೆಲವು ಸಮಯದಿಂದ ಮದರಸಾ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಮತ್ತು ಪಾರದರ್ಶಕತೆ ತರಲು ಪ್ರಯತ್ನಿಸುತ್ತಿದೆ. ಇದಕ್ಕೂ ಮೊದಲು ಅನಧಿಕೃತ ಮದರಸಾಗಳ ಸಮೀಕ್ಷೆಯನ್ನು ನಡೆಸಲಾಗಿತ್ತು.
ಸಂಪಾದಕೀಯ ನಿಲುವುಇಂತಹ ಮದರಸಾಗಳ ಮೇಲೆ ಸರಕಾರವು ತಕ್ಷಣವೇ ಏಕೆ ನಿಷೇಧ ಹೇರುತ್ತಿಲ್ಲ? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ