ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಜಾರ್ಖಂಡ್ ಸರಕಾರಕ್ಕೆ ನೋಟಿಸ್

ಧನಬಾದ (ಜಾರ್ಖಂಡ್) – ಇಲ್ಲಿ ಶ್ರೀರಾಮನವಮಿ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಕಲ್ಲು ತೂರಾಟ ನಡೆಸಿದ್ದರು; ಆದರೆ ಕಲ್ಲು ತೂರಾಟ ನಡೆಸಿದ ಆರೋಪಿಗಳ ಮೇಲೆ ಕ್ರಮ ಕೈಗೊಳ್ಳುವ ಬದಲಿಗೆ, ಪೊಲೀಸರು ಮೆರವಣಿಗೆಯ ಆಯೋಜಕರಾದ ಹಿಂದೂಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಪೊಲೀಸರು ಮೆರವಣಿಗೆಯ ಆಯೋಜಕರನ್ನು ವಶಕ್ಕೆ ಪಡೆದು, ಅವರನ್ನು ಹಗ್ಗದಿಂದ ಕಟ್ಟಿ ಮಾರುಕಟ್ಟೆಯಲ್ಲಿ ಮೆರವಣಿಗೆ ಮಾಡಿಸಿದ್ದಾರೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂನಗೋ ಅವರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಜಾರ್ಖಂಡ್ ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ ಮಹಾನಿರ್ದೇಶಕರಿಗೆ ನೋಟಿಸ್ ಕಳುಹಿಸಿದ್ದಾರೆ.
ಹಿಂದೂಗಳನ್ನು ಹಗ್ಗದಿಂದ ಕಟ್ಟಿ ಮಾರುಕಟ್ಟೆಯಲ್ಲಿ ಮೆರವಣಿಗೆ ಮಾಡಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಆಯೋಗವು ಹೇಳಿದೆ. ಈ ಪ್ರಕರಣದ ಕುರಿತು ೭ ದಿನಗಳಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಆಯೋಗವು ಆದೇಶಿಸಿದೆ.
೧. ಧನಬಾದನ ಬಲಿಯಾಪುರ ವ್ಯಾಪ್ತಿಯ ಭೀಖರಾಜಪುರ ಗ್ರಾಮದಲ್ಲಿ ಶ್ರೀರಾಮನವಮಿ ಮೆರವಣಿಗೆಯ ಮೇಲೆ ಮತಾಂಧ ಮುಸಲ್ಮಾನರು ಕಲ್ಲು ತೂರಾಟ ನಡೆಸಿದ್ದರು. ಈ ಕಲ್ಲು ತೂರಾಟದಲ್ಲಿ ಅನೇಕ ಹಿಂದೂ ಭಕ್ತರು ಗಾಯಗೊಂಡಿದ್ದಾರೆ.
೨. ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಎರಡೂ ಗುಂಪುಗಳ ಕೆಲವು ಜನರನ್ನು ವಶಕ್ಕೆ ಪಡೆದರು; ಆದರೆ ಕೇವಲ ಹಿಂದೂಗಳಿಗೆ ಅಯೋಗ್ಯ ವರ್ತನೆ ತೋರಿರುವುದರಿಂದ ಈ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.
೩. ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾದ ವಿಡಿಯೋದ ಪ್ರಕಾರ, ಪೊಲೀಸರು ಸಾಮಾಜಿಕ ಕಾರ್ಯಕರ್ತ ಶತ್ರುಘ್ನ ಮಹತೋ ಮತ್ತು ಮೆರವಣಿಗೆಯ ಇತರ ಆಯೋಜಕರನ್ನು ಹಗ್ಗದಿಂದ ಕಟ್ಟಿ ಬಹಿರಂಗವಾಗಿ ಮಾರುಕಟ್ಟೆಯಲ್ಲಿ ಮೆರವಣಿಗೆ ಮಾಡಿದ್ದಾರೆ.
೪. ಭಾರತೀಯ ಜನತಾ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಶಶಾಂಕ ರಾಜ್ ಅವರು ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ದಾಖಲಿಸಿದ್ದರು. ‘ಪೊಲೀಸರ ಈ ನಿಲುವು ಸಂಪೂರ್ಣವಾಗಿ ಪಕ್ಷಪಾತದಿಂದ ಕೂಡಿದೆ. ಕಲ್ಲು ತೂರಾಟ ಮುಸಲ್ಮಾನ ಗುಂಪಿನಿಂದ ನಡೆದಿದ್ದರೂ, ಮೆರವಣಿಗೆಯ ಆಯೋಜಕರನ್ನೇ ಅಪರಾಧಿಗಳಂತೆ ರಸ್ತೆಯಲ್ಲಿ ನಡೆಸಲಾಯಿತು’ ಎಂದು ಶಶಾಂಕ ರಾಜ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ.
೫. ಈ ಘಟನೆಯ ನಂತರ ಪರಿಸರದಲ್ಲಿ ಆಕ್ರೋಶದ ವಾತಾವರಣವಿದ್ದು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯ ಕೇಳಿಬರುತ್ತಿದೆ.
ಸಂಪಾದಕೀಯ ನಿಲುವು
|
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ