
ಭೋಪಾಲ್ (ಮಧ್ಯಪ್ರದೇಶ) – ದತಿಯಾದ ಕಾಂಗ್ರೆಸ್ಸಿನ ಶಾಸಕ ರಾಜೇಂದ್ರ ಭಾರತಿ ಅವರಿಗೆ ದೆಹಲಿಯ ಸಂಸದ-ಶಾಸಕರ ನ್ಯಾಯಾಲಯವು ೩ ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಹಾಗೆಯೆ ಅವರಿಗೆ ೧ ಲಕ್ಷ ರೂಪಾಯಿಗಳ ದಂಡವನ್ನೂ ವಿಧಿಸಲಾಗಿದೆ. ಅವರನ್ನು ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಬ್ಯಾಂಕಿನಲ್ಲಿ ನಿಶ್ಚಿತ ಠೇವಣಿಯನ್ನು ತಪ್ಪು ರೀತಿಯಲ್ಲಿ ಹೆಚ್ಚಿಸಿಕೊಂಡ ಆರೋಪ ಅವರ ಮೇಲಿತ್ತು.
೧. ರಾಜೇಂದ್ರ ಭಾರತಿ ಅವರ ತಾಯಿಯ ಹೆಸರಿನಲ್ಲಿ ೧೦ ಲಕ್ಷ ೫೦ ಸಾವಿರ ರೂಪಾಯಿಗಳ ನಿಶ್ಚಿತ ಠೇವಣಿ ದತಿಯಾ ಜಿಲ್ಲಾ ಸಹಕಾರಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಲ್ಲಿತ್ತು. ಈ ಠೇವಣಿಯ ಮೇಲೆ ೧೩.೫೦ ಪ್ರತಿಶತ ಬಡ್ಡಿದರ ಸಿಗುತ್ತಿತ್ತು.
೨. ಈ ಠೇವಣಿಯನ್ನು ೩ ವರ್ಷಗಳಿಂದ ೧೫ ವರ್ಷಗಳವರೆಗೆ ಹೆಚ್ಚಿಸಲಾಗಿತ್ತು. ಈ ಪ್ರಕರಣದಲ್ಲಿ ಬ್ಯಾಂಕ್ ಉದ್ಯೋಗಿ ನರೇಂದ್ರ ಸಿಂಗ್ ದೂರನ್ನು ನೊಂದಾಯಿಸಿದ್ದರು. ಆ ನಂತರ ನಡೆದ ವಿಚಾರಣೆಯಲ್ಲಿ ಸಂಸದ-ಶಾಸಕರ ನ್ಯಾಯಾಲಯವು ಅವರನ್ನು ದೋಷಿ ಎಂದು ಘೋಷಿಸಿ ೩ ವರ್ಷಗಳ ಜೈಲು ಶಿಕ್ಷೆ ವಿಧಿಸಿತು.
೩. ದತಿಯಾದ ಶಾಸಕ ರಾಜೇಂದ್ರ ಭಾರತಿ ಅವರನ್ನು ಕಾಂಗ್ರೆಸ್ನ ಪ್ರಭಾವಿ ನಾಯಕ ಎಂದು ಪರಿಗಣಿಸಲಾಗಿದೆ. ಅವರು ಕಳೆದ ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಭಾಜಪದ ಹಿರಿಯ ನಾಯಕ ಮತ್ತು ಮಾಜಿ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರನ್ನು ಸೋಲಿಸಿದ್ದರು. ಅವರು ೩ನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಸಂಪಾದಕೀಯ ನಿಲುವುಭ್ರಷ್ಟರು, ಲೂಟಿಕೋರರು, ಇತ್ಯಾದಿಗಳಿಂದ ತುಂಬಿರುವ ಕಾಂಗ್ರೆಸ್ ಜನರಿಗೆ ಏನು ಒಳ್ಳೆಯದನ್ನು ಮಾಡಲಿದೆ? ಇಂತಹ ಕಾಂಗ್ರೆಸ್ ಅನ್ನು ಈಗ ನಿಷೇಧಿಸಬೇಕು! |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ