ಅಧಿಕಾರಿಗಳನ್ನು ಒತ್ತೆ ಇರಿಸಿಕೊಳ್ಳುವಂತೆ ಜನರನ್ನು ಪ್ರಚೋದಿಸಿದ್ದ ಇಸ್ಲಾಂ

ಕೋಲಕಾತಾ(ಬಂಗಾಳ) – ಮುಸ್ಲಿಂ ಬಹುಸಂಖ್ಯಾತ ಮಾಲ್ದಾದಲ್ಲಿ ಏಪ್ರಿಲ್ 1 ರಂದು ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣಾ ಪ್ರಕ್ರಿಯೆಯ ಸಂದರ್ಭದಲ್ಲಿ 7 ನ್ಯಾಯಾಂಗ ಅಧಿಕಾರಿಗಳನ್ನು ಒತ್ತೆ ಇರಿಸಿಕೊಳ್ಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂತ್ರಧಾರ ಮತ್ತು ಕೋಲಕಾತಾ ಉಚ್ಚ ನ್ಯಾಯಾಲಯದ ವಕೀಲ ಮೊಫಕ್ಕರುಲ್ ಇಸ್ಲಾಂ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. (ಸುಶಿಕ್ಷಿತ ಮುಸ್ಲಿಮರ ನೈಜ ಸ್ವರೂಪ! – ಸಂಪಾದಕರು) ಆತ ಪರಾರಿಯಾಗಲು ಯತ್ನಿಸುತ್ತಿದ್ದಾಗ ಬಾಗ್ಡೋಗ್ರಾ ವಿಮಾನ ನಿಲ್ದಾಣದಲ್ಲಿ ಹಿಡಿಯಲಾಯಿತು. ಇಸ್ಲಾಂ ಎಐಎಂಐಎಂ(ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಪಕ್ಷದ ಮಾಜಿ ಅಭ್ಯರ್ಥಿಯಾಗಿದ್ದಾನೆ.
1. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ. ಜಯರಾಮನ್ ಅವರು, ಉತ್ತರ ದಿನಾಜ್ಪುರ ಜಿಲ್ಲೆಯ ಇತಾಹಾರ್ ಮೂಲದ ಮೊಫಕ್ಕರುಲ್ ಇಸ್ಲಾಂ ಪ್ರಸ್ತುತ ಕೋಲಕಾತಾದಲ್ಲಿ ವಾಸವಾಗಿದ್ದ ಎಂದು ತಿಳಿಸಿದರು.
2. ಪ್ರಚೋದನಕಾರಿ ಭಾಷಣ ಮಾಡಿ ಅಧಿಕಾರಿಗಳ ವಿರುದ್ಧ ಜನರನ್ನು ರೊಚ್ಚಿಗೆಬ್ಬಿಸಿದ ಆರೋಪದಡಿ ಇಸ್ಲಾಂ ವಿರುದ್ಧ ಕಾಲಿಯಾಚಕ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ.
3. ಪೊಲೀಸರು ಇಸ್ಲಾಂನ ಚಲನವಲನದ ಮೇಲೆ ನಿಗಾ ಇರಿಸಿದ್ದರು. ಬಂಗಾಳದ ಅಪರಾಧ ತನಿಖಾ ಇಲಾಖೆ (CID) ಮತ್ತು ಸಿಲಿಗುಡಿ ಪೊಲೀಸರ ಸಹಾಯದಿಂದ ಇಸ್ಲಾಂ ಮತ್ತು ಅವನ ಸಹಚರನನ್ನು ಬಾಗ್ಡೋಗ್ರಾ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಯಿತು ಎಂದು ಜಯರಾಮನ್ ವಿವರಿಸಿದರು.
4.ಮೂರು ಬೇರೆ ಬೇರೆ ಸ್ಥಳಗಳಲ್ಲಿ ಜನರನ್ನು ಪ್ರಚೋದಿಸಿದ ಸಂಬಂಧ ಈತನ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಹಾಗೆಯೇ ಕಾಲಿಯಾಚಕ್ ಘಟನೆಗೆ ಸಂಬಂಧಿಸಿದಂತೆ ಒಟ್ಟು 19 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.
5. ಈ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಈಗ 35ಕ್ಕೆ ಏರಿದೆ.
ಜನರನ್ನು ಪ್ರಚೋದಿಸಿದ ‘ಇಂಡಿಯನ್ ಸೆಕ್ಯುಲರ್ ಫ್ರಂಟ್’ ಅಭ್ಯರ್ಥಿಯ ಮೇಲೂ ಕ್ರಮ!
ಹೆಸರಿಗೆ ‘ಸೆಕ್ಯುಲರ್’ (ಜಾತ್ಯತೀತ) ಎಂದಿದ್ದರೂ ಮುಸ್ಲಿಮರನ್ನು ಪ್ರಚೋದಿಸುವ ಕೆಲಸ ಮಾಡುವ ಈ ಸಂಘಟನೆಯ ಜಾತ್ಯತೀತತೆಯ ವ್ಯಾಖ್ಯಾನವು ಕಾಂಗ್ರೆಸ್ನಂತೆಯೇ ದೇಶ ವಿರೋಧಿ ವಿಚಾರಗಳಿಂದ ಪ್ರೇರಿತವಾಗಿದೆ ಎಂದೇ ಹೇಳಬೇಕಾಗುತ್ತದೆ!
ಈ ಪ್ರಕರಣದಲ್ಲಿ ‘ಇಂಡಿಯನ್ ಸೆಕ್ಯುಲರ್ ಫ್ರಂಟ್’ ಅಭ್ಯರ್ಥಿ ಶಹಜಹಾನ್ ಅಲಿ ಖಾದ್ರಿ ಎಂಬಾತನನ್ನು ಸಹ ಬಂಧಿಸಲಾಗಿದೆ. ಈತನೇ ಜನರನ್ನು ಕೆರಳಿಸಿದ್ದನು. ಖಾದ್ರಿಯ ಬಂಧನವು ಸಂಪೂರ್ಣವಾಗಿ ಕಾನೂನುಬಾಹಿರ ಎಂದು ‘ಇಂಡಿಯನ್ ಸೆಕ್ಯುಲರ್ ಫ್ರಂಟ್’ ಹೇಳಿದ್ದು, ಆತ ನಾಮಪತ್ರ ಸಲ್ಲಿಸುವುದನ್ನು ತಡೆಯಲು ರಾಜ್ಯ ಸರಕಾರವು ಈ ಪಿತೂರಿ ನಡೆಸಿದೆ ಎಂದು ಆರೋಪಿಸಿದೆ.
ಸಂಪಾದಕೀಯ ನಿಲುವು
|
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ