ನಾನು ಮುಖ್ಯಮಂತ್ರಿಯಾದರೆ, ಅಲ್ಪಸಂಖ್ಯಾತರ ಪಟ್ಟಿಯಿಂದ ಮುಸಲ್ಮಾನರನ್ನು ಕೈಬಿಡುತ್ತೇನೆ ! – Basanagouda Patil Yatnal

ಭಾಜಪದಿಂದ ಅಮಾನತುಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ

ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ – ಮುಸಲ್ಮಾನರ ಜನಸಂಖ್ಯೆಯು ಗಣನೀಯವಾಗಿ ಹೆಚ್ಚಾಗುತ್ತಿದ್ದು, ಅವರನ್ನು ಅಲ್ಪಸಂಖ್ಯಾತರೆಂದು ಪರಿಗಣಿಸುವುದು ತಪ್ಪು. ನಾನು ರಾಜ್ಯದ ಮುಖ್ಯಮಂತ್ರಿಯಾದರೆ, ನನ್ನ ಸಚಿವ ಸಂಪುಟದ ಮೊದಲ ಸಭೆಯಲ್ಲಿಯೇ ಮುಸಲ್ಮಾನರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ತೆಗೆದುಹಾಕುತ್ತೇನೆ ಎಂದು ಭಾಜಪದಿಂದ ಅಮಾನತುಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ‘ನಾನು ಈ ನಿರ್ಧಾರಕ್ಕೆ ಬದ್ಧನಾಗಿದ್ದೇನೆ ಮತ್ತು ಅಧಿಕಾರ ಸಿಕ್ಕರೆ ಖಂಡಿತವಾಗಿಯೂ ಈ ನಿರ್ಧಾರವನ್ನು ಜಾರಿಗೆ ತರುತ್ತೇನೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡುತ್ತಿದ್ದರು.

ಶಾಸಕ ಯತ್ನಾಳ್ ಅವರು ಮಾತು ಮುಂದುವರೆಸಿ, ಭಾರತದಲ್ಲಿ ಎಲ್ಲರಿಗೂ ಸಮಾನ ಕಾನೂನು ಇರಬೇಕು. ಯಾವುದೇ ನಿರ್ದಿಷ್ಟ ವರ್ಗಕ್ಕೆ ವಿಶೇಷ ಸೌಲಭ್ಯಗಳನ್ನು ಅಥವಾ ಸ್ಥಾನಮಾನವನ್ನು ನೀಡುವ ಅಗತ್ಯವಿಲ್ಲ ಎಂದು ಹೇಳಿದರು.

ಸಂಪಾದಕೀಯ ನಿಲುವು

  • ಈ ದೇಶದಲ್ಲಿ ‘ಅಲ್ಪಸಂಖ್ಯಾತರು’ ಎಂದು ಯಾರಿಗೆ ಹೇಳಬೇಕು? ಎಂಬುದನ್ನು ಈಗ ವ್ಯಾಖ್ಯಾನಿಸುವ ಅಗತ್ಯವಿದೆ. ದೇಶದ ಜನಸಂಖ್ಯೆಗೆ ಹೋಲಿಸಿದರೆ ಎಷ್ಟು ಶೇಕಡಾವಾರು ಜನಸಂಖ್ಯೆ ಇದ್ದಾಗ ಸಂಬಂಧಿತ ಧರ್ಮದವರನ್ನು ‘ಅಲ್ಪಸಂಖ್ಯಾತರು’ ಎಂದು ಕರೆಯಬೇಕು? ಎಂಬುದನ್ನು ಸ್ಪಷ್ಟಪಡಿಸುವ ಅವಶ್ಯಕತೆಯಿದೆ !
  • 2011 ರ ಜನಗಣತಿಯ ಪ್ರಕಾರ ದೇಶದಲ್ಲಿ ಮುಸಲ್ಮಾನರು ಶೇ. 14 ರಷ್ಟಿದ್ದಾರೆ; ಆದರೆ ಕಳೆದ 15 ವರ್ಷಗಳಲ್ಲಿ ಅವರ ಜನಸಂಖ್ಯೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಅದು ಶೇ. 20 ಕ್ಕಿಂತ ಹೆಚ್ಚಿರುವ ಸಾಧ್ಯತೆಯಿರುವುದರಿಂದ, ಅವರನ್ನು ಅಲ್ಪಸಂಖ್ಯಾತರ ಪಟ್ಟಿಯಿಂದ ಕೈಬಿಡುವಂತೆ ಯಾರಾದರೂ ಆಗ್ರಹಿಸಿದರೆ ಅದು ತಪ್ಪಾಗುವುದಿಲ್ಲ !