ಗ್ರೆನೇಡ್ ಪಾಕಿಸ್ತಾನದಿಂದ ಕಳುಹಿಸಿರುವ ಶಂಕೆ

ಚಂಡೀಗಢ – ಇಲ್ಲಿನ ಭಾಜಪದ ಕಚೇರಿಯ ಮೇಲೆ ಗ್ರೆನೇಡ್ ಎಸೆದ ಪ್ರಕರಣದಲ್ಲಿ ಪಂಜಾಬ್ ಪೊಲೀಸರ ಅಪರಾಧ ತನಿಖಾ ದಳವು ರೂಪನಗರದ ಮೊರಿಂದಾ ಪ್ರದೇಶದಿಂದ ಅಮನ್ ಸಿಂಗ್ ಅಲಿಯಾಸ್ ಭೋಲು ಮತ್ತು ಗುರುತೇಜ್ ಸಿಂಗ್ ಎಂಬುವವರನ್ನು ಬಂಧಿಸಿದೆ. ಇವರು ರತ್ನಗಢ ಗ್ರಾಮದ ನಿವಾಸಿಗಳಾಗಿದ್ದಾರೆ. ಈ ಆರೋಪಿಗಳಿಗೆ ಹಣಕಾಸಿನ ನೆರವು ಮತ್ತು ಸೂಚನೆಗಳು ಎಲ್ಲಿಂದ ಬಂದವು, ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ದಾಳಿಯ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದನಾ ಸಂಘಟನೆ ‘ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್’ನ ಸುಖಜಿಂದರ್ ಸಿಂಗ್ ಬಬ್ಬರ್ ಎಂಬಾತ ವಹಿಸಿಕೊಂಡಿದ್ದಾನೆ. ಗ್ರೆನೇಡ್ ಸ್ಫೋಟದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಎಸೆಯಲಾದ ಗ್ರೆನೇಡ್ ಅನ್ನು ಪಾಕಿಸ್ತಾನದಿಂದ ಡ್ರೋನ್ ಮೂಲಕ ಭಾರತಕ್ಕೆ ಕಳುಹಿಸಲಾಗಿದೆ ಎಂದು ಭದ್ರತಾ ಸಂಸ್ಥೆಗಳು ಶಂಕಿಸಿವೆ.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ