ಗ್ರೆನೇಡ್ ಪಾಕಿಸ್ತಾನದಿಂದ ಕಳುಹಿಸಿರುವ ಶಂಕೆ

ಚಂಡೀಗಢ – ಇಲ್ಲಿನ ಭಾಜಪದ ಕಚೇರಿಯ ಮೇಲೆ ಗ್ರೆನೇಡ್ ಎಸೆದ ಪ್ರಕರಣದಲ್ಲಿ ಪಂಜಾಬ್ ಪೊಲೀಸರ ಅಪರಾಧ ತನಿಖಾ ದಳವು ರೂಪನಗರದ ಮೊರಿಂದಾ ಪ್ರದೇಶದಿಂದ ಅಮನ್ ಸಿಂಗ್ ಅಲಿಯಾಸ್ ಭೋಲು ಮತ್ತು ಗುರುತೇಜ್ ಸಿಂಗ್ ಎಂಬುವವರನ್ನು ಬಂಧಿಸಿದೆ. ಇವರು ರತ್ನಗಢ ಗ್ರಾಮದ ನಿವಾಸಿಗಳಾಗಿದ್ದಾರೆ. ಈ ಆರೋಪಿಗಳಿಗೆ ಹಣಕಾಸಿನ ನೆರವು ಮತ್ತು ಸೂಚನೆಗಳು ಎಲ್ಲಿಂದ ಬಂದವು, ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ದಾಳಿಯ ಹೊಣೆಯನ್ನು ಖಲಿಸ್ತಾನಿ ಭಯೋತ್ಪಾದನಾ ಸಂಘಟನೆ ‘ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್’ನ ಸುಖಜಿಂದರ್ ಸಿಂಗ್ ಬಬ್ಬರ್ ಎಂಬಾತ ವಹಿಸಿಕೊಂಡಿದ್ದಾನೆ. ಗ್ರೆನೇಡ್ ಸ್ಫೋಟದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಎಸೆಯಲಾದ ಗ್ರೆನೇಡ್ ಅನ್ನು ಪಾಕಿಸ್ತಾನದಿಂದ ಡ್ರೋನ್ ಮೂಲಕ ಭಾರತಕ್ಕೆ ಕಳುಹಿಸಲಾಗಿದೆ ಎಂದು ಭದ್ರತಾ ಸಂಸ್ಥೆಗಳು ಶಂಕಿಸಿವೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ