
ಮೋತಿಹಾರಿ (ಬಿಹಾರ) – ರಾಜ್ಯದ ಪೂರ್ವ ಚಂಪಾರಣ ಜಿಲ್ಲೆಯು ಜಿಹಾದಿ ಚಟುವಟಿಕೆಗಳ ಕಾರಣಕ್ಕಾಗಿ ಮತ್ತೊಮ್ಮೆ ಸುದ್ದಿಯಲ್ಲಿದೆ. ಜಿಲ್ಲೆಯ ಚಕಿಯಾ ಪರಿಸರದ ಗವಂದರಾ ಗ್ರಾಮದ ಮದರಸಾದ ಮೇಲೆ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿ ದಾಳಿ ಮಾಡಿದ್ದಾರೆ. ಈ ವೇಳೆ ಒಂದು ಅತ್ಯಾಧುನಿಕ ಪಿಸ್ತೂಲನ್ನು ವಶಪಡಿಸಿಕೊಳ್ಳಲಾಗಿದ್ದು, ಮೂವರನ್ನು ಬಂಧಿಸಲಾಗಿದೆ. ಮೋತಿಹಾರಿಯ ಪೊಲೀಸ್ ಅಧೀಕ್ಷಕರಾದ ಸ್ವರ್ಣ ಪ್ರಭಾತ ಅವರು ಸ್ವತಃ ಈ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಿದರು.
ಸದರಿ ಮದರಸಾಗೆ ತಕ್ಷಣವೇ ಬೀಗ ಜಡಿಯಲಾಗಿದೆ. ಯಾವುದೋ ದೊಡ್ಡ ದಾಳಿ ನಡೆಸುವ ಉದ್ದೇಶದಿಂದಲೇ ಈ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಡಲಾಗುತ್ತಿತ್ತು ಎಂದು ಪೊಲೀಸರು ಸಂಶಯ ವ್ಯಕ್ತಪಡಿಸಿದ್ದಾರೆ. ಇದೇ ಮದರಸಾದಿಂದ ಎರಡೂವರೆ ವರ್ಷಗಳ ಹಿಂದೆ, ನಿಷೇಧಿತ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ಪ್ರಮುಖ ಸದಸ್ಯ ಸುಲ್ತಾನ್ ಉರ್ಫ್ ಉಸ್ಮಾನ್ ಉರ್ಫ್ ಯಾಕೂಬ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು. ಮದರಸಾದಲ್ಲಿ ಶಸ್ತ್ರಾಸ್ತ್ರಗಳಿರುವ ಬಗ್ಗೆ ಗುಪ್ತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಪೊಲೀಸ್ ಅಧೀಕ್ಷಕ ಸ್ವರ್ಣ ಪ್ರಭಾತ ತಿಳಿಸಿದ್ದಾರೆ.
ಸಂಪಾದಕೀಯ ನಿಲುವು
|
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ