ಸಿಇಟಿ ಪರೀಕ್ಷೆ; ಏಕವಚನದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಉಲ್ಲೇಖ

  • ಶಿವಾಜಿ ಮಹಾರಾಜರ ಅಭಿಮಾನಿಗಳು ಮತ್ತು ವಿದ್ಯಾರ್ಥಿಗಳ ಭಾವನೆಗಳಿಗೆ ಧಕ್ಕೆ

  • ದೋಷಿಗಳ ವಿರುದ್ಧ ಆಡಳಿತಾತ್ಮಕ ಕ್ರಮಕ್ಕೆ ಆಗ್ರಹ

ಪುಣೆ – ರಾಜ್ಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಮಂಡಳಿಯು ನಡೆಸಿದ ಎಲ್.ಎಲ್.ಬಿ. ಮೂರನೇ ವರ್ಷದ ಪರೀಕ್ಷೆಯಲ್ಲಿ ಹಿಂದವಿ ಸ್ವರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರನ್ನು ಏಕವಚನದಲ್ಲಿ ಉಲ್ಲೇಖಿಸುವ ಮೂಲಕ ಅವಮಾನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಸಂಬಂಧಿತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದೌಂಡ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರಾಹುಲ್ ಕುಲ್ ಅವರು ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಏಪ್ರಿಲ್ 2, 2026 ರಂದು ನಡೆದ ಆನ್‌ಲೈನ್ ಪರೀಕ್ಷೆಯ ಸಾಮಾನ್ಯ ಜ್ಞಾನ ವಿಭಾಗದಲ್ಲಿ, ‘ಶಿವಾಜಿಯ ಮಂತ್ರಿಮಂಡಲದ ಹೆಸರೇನು?’ ಎಂಬ ಪ್ರಶ್ನೆಯನ್ನು ಕೇಳಲಾಗಿತ್ತು.

ಈ ಕುರಿತು ಶಾಸಕ ರಾಹುಲ್ ಅವರು ಮಾತನಾಡಿ, ಪರೀಕ್ಷೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರಂತಹ ಶ್ರೇಷ್ಠ ಮಹಾಪುರುಷರ ಉಲ್ಲೇಖವು ಏಕವಚನದಲ್ಲಿರುವುದು ಅತ್ಯಂತ ವಿಷಾದನೀಯ ಸಂಗತಿಯಾಗಿದೆ. ಈ ಘಟನೆಯಿಂದ ಶಿವಾಜಿ ಮಹಾರಾಜರ ಅಭಿಮಾನಿಗಳು ಮತ್ತು ವಿದ್ಯಾರ್ಥಿಗಳ ಭಾವನೆಗಳಿಗೆ ನೋವುಂಟಾಗಿದೆ. ಈ ಸಂಬಂಧ ಹಲವು ಅಭ್ಯರ್ಥಿಗಳು ನನ್ನ ಬಳಿ ದೂರು ನೀಡಿದ್ದಾರೆ, ಎಂದು ರಾಹುಲ್ ಹೇಳಿದರು.

ಶಾಸಕ ರಾಹುಲ್ ಕುಲ್ ಅವರು ಪತ್ರದ ಮೂಲಕ ಮಾಡಿರುವ ಬೇಡಿಕೆಗಳು,

೧. ಸದರಿ ಪ್ರಶ್ನೆಪತ್ರಿಕೆಯನ್ನು ಸಿದ್ಧಪಡಿಸಿದ ಸಮಿತಿ ಮತ್ತು ಸಂಬಂಧಪಟ್ಟ ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ ತಕ್ಷಣವೇ ಕಠಿಣ ಆಡಳಿತಾತ್ಮಕ ಕ್ರಮ ಕೈಗೊಳ್ಳಬೇಕು.

೨. ಸಿಇಟಿ ವಿಭಾಗವು ಈ ಗಂಭೀರ ತಪ್ಪಿಗಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು.

೩. ಭವಿಷ್ಯದಲ್ಲಿ ಯಾವುದೇ ಸರಕಾರೀ ಅಥವಾ ಶೈಕ್ಷಣಿಕ ಪರೀಕ್ಷೆಗಳಲ್ಲಿ ಮಹಾಪುರುಷರಿಗೆ ಅವಮಾನವಾಗದಂತೆ ಸ್ಪಷ್ಟ ಮಾರ್ಗಸೂಚಿಗಳನ್ನು ಸಿದ್ಧಪಡಿಸಬೇಕು.

೪. ಎಲ್ಲಾ ಶೈಕ್ಷಣಿಕ ಸಾಹಿತ್ಯ ಮತ್ತು ಪ್ರಶ್ನೆಪತ್ರಿಕೆಗಳಲ್ಲಿ ‘ಛತ್ರಪತಿ ಶಿವಾಜಿ ಮಹಾರಾಜ’ ಎಂದೇ ಪೂರ್ಣ ಮತ್ತು ಗೌರವಯುತವಾಗಿ ಉಲ್ಲೇಖಿಸುವುದನ್ನು ಕಡ್ಡಾಯಗೊಳಿಸಬೇಕು.

ಸಂಪಾದಕೀಯ ನಿಲುವು

ಈ ಪ್ರಕರಣದ ದೋಷಿಗಳನ್ನು ಸರಕಾರ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು!