ಬಂಗಾಳ ವಿಧಾನಸಭಾ ಚುನಾವಣೆ

ಕೋಲಕಾತಾ – ಬಂಗಾಳ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರದಲ್ಲಿ ಭಾಜಪ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ. ನಗರದ ಬೆಹಾಲಾ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ರತ್ನಾ ಚಟ್ಟೋಪಾಧ್ಯಾಯ ಅವರ ಸಮ್ಮುಖದಲ್ಲಿ ಅವರ ಬೆಂಬಲಿಗರು ಭಾಜಪ ಕಚೇರಿಯನ್ನು ಧ್ವಂಸಗೊಳಿಸಿದರು. ಭಾಜಪ ಬೆಂಬಲಿಗರು ವಿರೋಧಿಸಿದಾಗ ಎರಡೂ ಗುಂಪುಗಳ ನಡುವೆ ಘರ್ಷಣೆ ಏರ್ಪಟ್ಟಿತು. ಭಾಜಪದ ಪ್ರಕಾರ, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಪಕ್ಷದ ಕಚೇರಿಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಮತ್ತು ಪ್ರವೇಶ ದ್ವಾರವನ್ನು ಹಾನಿಗೊಳಿಸಿದ್ದಾರೆ.
Democracy Under Attack In Bengal! 🚩🔥
The mask has fallen once again. In a blatant display of lawlessness, Trinamool Congress (TMC) goons have brutally attacked and vandalised a BJP office during the Bengal Assembly Elections.
This isn't just an attack on a building; it is an… pic.twitter.com/8WLzLPj4vS
— Sanatan Prabhat (@SanatanPrabhat) April 6, 2026
೧. ಈ ಘಟನೆಯ ಕುರಿತು ಭಾಜಪ ಅಭ್ಯರ್ಥಿ ಇಂದ್ರನೀಲ್ ಖಾನ್ ಆರೋಪ ಮಾಡಿದ್ದು, ಬೆಹಾಲಾ ಪಶ್ಚಿಮ ಕ್ಷೇತ್ರದಲ್ಲಿ ಸೋಲಿನ ಭೀತಿಯಿಂದ ತೃಣಮೂಲ ಕಾಂಗ್ರೆಸ್ ಈ ಕೃತ್ಯ ಎಸಗಿದೆ ಎಂದಿದ್ದಾರೆ. ರತ್ನಾ ಚಟ್ಟೋಪಾಧ್ಯಾಯ ಮತ್ತು ಅವರ ಬೆಂಬಲಿಗರು ಪೊಲೀಸರ ಸಮ್ಮುಖದಲ್ಲೇ ಭಾಜಪ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಹಾಗೂ ಪೊಲೀಸರು ಅದನ್ನು ತಡೆಯುವ ಬದಲು ಸುಮ್ಮನಿದ್ದರು ಎಂದು ಅವರು ಆರೋಪಿಸಿದ್ದಾರೆ.
೨. ಘಟನೆಯ ನಂತರ ಇಂದ್ರನೀಲ್ ಖಾನ್ ಅವರು ತಮ್ಮ ಬೆಂಬಲಿಗರೊಂದಿಗೆ ಪರ್ಣಶ್ರೀ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ. ಮತ್ತೊಂದೆಡೆ ರತ್ನಾ ಚಟ್ಟೋಪಾಧ್ಯಾಯ ಕೂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರಿಂದಾಗಿ ಅಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಮುಖಾಮುಖಿಯಾಗಿ ಪ್ರತಿಭಟನೆ ಆರಂಭಿಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಪ್ರಸ್ತುತ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.
ಸಂಪಾದಕೀಯ ನಿಲುವುಗೂಂಡಾ ಕಾರ್ಯಕರ್ತರಿಂದ ತುಂಬಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಜನತೆಗೆ ಎಂತಹ ಕಾನೂನು ಆಡಳಿತವನ್ನು ನೀಡೀತು? |
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ