ನಾಪತ್ತೆಯಾದ ಸೋದರಳಿಯನನ್ನು ಪೊಲೀಸರು ಹುಡುಕಿಕೊಡದ ಅಳಲನ್ನು ತೋಡಿಕೊಳ್ಳಲು ಈ ಕೃತ್ಯ ಎಸಗಿರುವುದಾಗಿ ಆರೋಪಿಯ ದಾವೆ

ನವ ದೆಹಲಿ – ದೆಹಲಿ ವಿಧಾನಸಭೆಯ ಪ್ರವೇಶ ದ್ವಾರದ ಮುಂದಿನ ತಡೆಗೋಡೆಗಳನ್ನು ಮೀರಿ ಒಳನುಗ್ಗಿದ ಕಾರಿನ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆಯೇ ಅವನ ವಾಹನವನ್ನೂ ಜಪ್ತಿ ಮಾಡಲಾಗಿದೆ. ಸರಬಜೀತ್ ಎಂಬಾತನೇ ಬಂಧಿತ ಆರೋಪಿ ವಾಹನ ಚಾಲಕ. ಈ ಕೃತ್ಯದ ಹಿಂದಿನ ಕಾರಣವನ್ನು ತಿಳಿಸಿದ ಸರಬಜೀತ್, ತನ್ನ ಸೋದರಳಿಯ ಏಪ್ರಿಲ್ ೧ ರಿಂದ ನಾಪತ್ತೆಯಾಗಿದ್ದಾನೆ, ಈ ಬಗ್ಗೆ ಹರಿನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದರೂ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದ ಕಾರಣ ತಾನು ನಿರಾಶೆಗೊಂಡಿದ್ದೆ ಎಂದು ತಿಳಿಸಿದ್ದಾನೆ. ಇದೇ ಕಾರಣಕ್ಕಾಗಿ ನೇರವಾಗಿ ವಿಧಾನಸಭೆಗೆ ನುಗ್ಗಿ ಯಾರಾದರೂ ಹಿರಿಯ ಅಧಿಕಾರಿಗೆ ತನ್ನ ಅಳಲನ್ನು ತಲುಪಿಸುವ ಪ್ರಯತ್ನ ಮಾಡಿದ್ದಾಗಿ ಅವನು ಹೇಳಿದ್ದಾನೆ.
ಪೊಲೀಸರಿಗೆ ಸರಬಜೀತ್ ಬಳಿ ಯಾವುದೇ ಶಸ್ತ್ರಾಸ್ತ್ರಗಳು ಪತ್ತೆಯಾಗಿಲ್ಲ; ಆದರೆ ವಾಹನವನ್ನು ನೇರವಾಗಿ ತಡೆಗೋಡೆಗಳನ್ನು ಮುರಿದು ಒಳಗೆ ನುಗ್ಗಿಸಿದ್ದಕ್ಕಾಗಿ ಅವನ ಮೇಲೆ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ. ಸರಬಜೀತ್ ಪತ್ನಿಯು ಅವನ ಚಿಕಿತ್ಸೆಗೆ ಸಂಬಂಧಿಸಿದ ವೈದ್ಯಕೀಯ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದು, ಅವನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದು ತಿಳಿಸಿದ್ದಾಳೆ.
ಸಂಪಾದಕೀಯ ನಿಲುವು
|
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!