ರಾಜನಾಥ್ ಸಿಂಗ್ ಅವರಿಂದ ಪಾಕಿಸ್ತಾನದ ರಕ್ಷಣಾ ಸಚಿವರಿಗೆ ತಕ್ಕ ಪ್ರತ್ಯುತ್ತರ!

ಬೈರಕಾಪುರ (ಬಂಗಾಳ) – ‘ಪಾಕಿಸ್ತಾನ ಕೋಲ್ಕಾತಾವರೆಗೆ ನುಗ್ಗಲಿದೆ’ ಎಂಬ ಪಾಕಿಸ್ತಾನದ ರಕ್ಷಣಾ ಸಚಿವ ಖ್ವಾಜಾ ಆಸಿಫ್ ಅವರ ಹೇಳಿಕೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿರುಗೇಟು ನೀಡಿದ್ದಾರೆ. ೧೯೭೧ ರ ಯುದ್ಧದಲ್ಲಿ ಭಾರತವು ಪಾಕಿಸ್ತಾನವನ್ನು ಎರಡ ಭಾಗ ಮಾಡಿತ್ತು ಎಂಬುದನ್ನು ಅವರು ಮರೆಯಬಾರದು ಎಂದು ಸಿಂಗ್ ಹೇಳಿದರು. ಈಗ ಒಂದು ವೇಳೆ ಪಾಕಿಸ್ತಾನವು ಬಂಗಾಳದ ಮೇಲೆ ವಕ್ರದೃಷ್ಟಿ ಹಾಕಿದರೆ, ಪಾಕ್ ಎಷ್ಟು ಭಾಗಗಳಾಗಬಹುದು ಎಂಬುದನ್ನು ಊಹಿಸಲೂ ಸಾಧ್ಯವಿಲ್ಲ. ಆದ್ದರಿಂದ ಪಾಕಿಸ್ತಾನವು ಸಂಯಮದಿಂದ ಇರಬೇಕು ಮತ್ತು ಇತಿಹಾಸದಿಂದ ಪಾಠ ಕಲಿಯಬೇಕು ಎಂದು ಅವರು ಎಚ್ಚರಿಸಿದರು. ಸಿಂಗ್ ಅವರು ಇಲ್ಲಿನ ಚುನಾವಣಾ ಪ್ರಚಾರ ಸಭೆಯೊಂದರಲ್ಲಿ ಮಾತನಾಡುತ್ತಿದ್ದರು.
ತೃಣಮೂಲ ಕಾಂಗ್ರೆಸ್ ನ ನಾಯಕ ಅಭಿಷೇಕ್ ಬ್ಯಾನರ್ಜಿ ಅವರು ಆಸಿಫ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಕೇಂದ್ರ ಸರಕಾರ ಮತ್ತು ಪ್ರಧಾನಿ ಮೋದಿ ಅವರ ವಿರುದ್ಧ ಟೀಕೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್ ಮಾತನಾಡಿ, ದೇಶದ ರಕ್ಷಣಾ ಸಚಿವನಾಗಿ ನಾನೇ ಸ್ವತಃ ಈ ನಿಲುವನ್ನು ಮಂಡಿಸುತ್ತಿದ್ದೇನೆ. ಪ್ರತಿ ಬಾರಿಯೂ ಪ್ರಧಾನಿಯವರೇ ಮಾತನಾಡುವ ಅವಶ್ಯಕತೆ ಇಲ್ಲ. ದೇಶದ ಸುರಕ್ಷತೆಗೆ ಸಂಬಂಧಿಸಿದಂತೆ ಸರಕಾರದ ನಿಲುವು ಸಂಪೂರ್ಣ ಸ್ಪಷ್ಟವಾಗಿದೆ ಎಂದು ಹೇಳಿದರು.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬೆಂಗಳೂರಿನ 97 ಲಕ್ಷ ಮತದಾರರಲ್ಲಿ 3.5–4 ಲಕ್ಷ ಮತದಾರರು ಅಸಿಂಧು ಮತದಾರರಾಗಿರಬಹುದು!”