
ಮೊರೆನಾ (ಮಧ್ಯಪ್ರದೇಶ) – ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟದ ಮೇಲೆ ಕ್ರಮ ಕೈಗೊಳ್ಳಲು ತೆರಳಿದ್ದ ಅರಣ್ಯ ಇಲಾಖೆ ತಂಡದ ಮೇಲೆ ಮರಳು ಮಾಫಿಯಾಗಳು ದಾಳಿ ಮಾಡಿದ್ದಾರೆ. ಮರಳು ಮಾಫಿಯಾ ಅರಣ್ಯ ರಕ್ಷಕ ಹರಕೇಶ್ ಗುರ್ಜರ್ ಅವರ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾನೆ. ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪೊಲೀಸರು ತಿಳಿಸಿದಂತೆ, ಅಕ್ರಮ ಮರಳು ಸಾಗಾಟದ ಬಗ್ಗೆ கிடைத்த ಮಾಹಿತಿಯ ಮೇರೆಗೆ ಅರಣ್ಯ ಇಲಾಖೆಯ ೬ ಸದಸ್ಯರ ತಂಡವು ಕ್ರಮ ಕೈಗೊಳ್ಳಲು ತಲುಪಿತ್ತು. ಈ ವೇಳೆ ಮರಳು ಮಾಫಿಯಾ ವಿನೋದ್ ಕೋರಿ ಮರಳು ತುಂಬಿದ ಟ್ರ್ಯಾಕ್ಟರ್-ಟ್ರಾಲಿ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ. ಅರಣ್ಯ ರಕ್ಷಕ ಹರಕೇಶ್ ಗುರ್ಜರ್ ಆತನನ್ನು ತಡೆಯಲು ಮುಂದೆ ಬಂದಾಗ ವಿನೋದ್ ಅವರ ಮೇಲೆ ಟ್ರ್ಯಾಕ್ಟರ್ ಹರಿಸಿದ್ದಾನೆ. ಆ ಬಳಿಕ ಆತ ಟ್ರ್ಯಾಕ್ಟರ್-ಟ್ರಾಲಿ ಸಮೇತ ಪರಾರಿಯಾಗಿದ್ದಾನೆ.
ಜಿಲ್ಲಾಧಿಕಾರಿ ಲೋಕೇಶ ಕುಮಾರ ಜಂಗೀಡ್, ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಹರಿಶ್ಚಂದ್ರ ಬಘೇಲ್ ಘಟನಾ ಸ್ಥಳಕ್ಕೆ ತಲುಪಿದರು. ಪೊಲೀಸರು ಅಪರಿಚಿತ ಆರೋಪಿಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!