ಮಧ್ಯಪ್ರದೇಶ: ದೀಪಾವಳಿಗೂ ಮುನ್ನ ಸಮಾನ ನಾಗರಿಕ ಸಂಹಿತೆ ಜಾರಿಗೆ ಸಿದ್ಧತೆ

ಭೋಪಾಲ್ (ಮಧ್ಯಪ್ರದೇಶ) – ಮಧ್ಯಪ್ರದೇಶದಲ್ಲಿಯೂ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತರಲು ಮುಖ್ಯಮಂತ್ರಿ ಡಾ. ಮೋಹನ ಯಾದವ ಅವರು ಸಚಿವ ಸಂಪುಟದ ಸಭೆಯಲ್ಲಿ ಸಚಿವರಿಗೆ ಈ ಕಾಯಿದೆಯ ಬಗ್ಗೆ ಅಧ್ಯಯನ ಮಾಡುವಂತೆ ಸೂಚಿಸಿದ್ದಾರೆ.

ಮೂಲಗಳ ಪ್ರಕಾರ, ಶೀಘ್ರದಲ್ಲೇ ರಾಜ್ಯ ಮಟ್ಟದಲ್ಲಿ ಉನ್ನತ ಮಟ್ಟದ ಸಮಿತಿಯನ್ನು ಸ್ಥಾಪಿಸಲಾಗುವುದು. ಇದೇ ವರ್ಷ ದೀಪಾವಳಿಗೂ ಮುನ್ನ ರಾಜ್ಯದಲ್ಲಿ ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವ ಸಾಧ್ಯತೆಯಿದೆ. ದೇಶದಲ್ಲಿ ಈಗಾಗಲೇ ಉತ್ತರಾಖಂಡ ಮತ್ತು ಗುಜರಾತ ರಾಜ್ಯಗಳು ಸಮಾನ ನಾಗರಿಕ ಸಂಹಿತೆಯನ್ನು ಜಾರಿಗೆ ತಂದಿವೆ, ಹಾಗೆಯೇ ಗೋವಾದಲ್ಲಿ ಪೋರ್ಚುಗೀಸರ ಕಾಲದಿಂದಲೂ ಈ ಕಾಯಿದೆಯು ಅಸ್ತಿತ್ವದಲ್ಲಿದೆ.