ಖೋಪೋಲಿ: ವೇತಾಳ ಮೂರ್ತಿ ದೇವಸ್ಥಾನ ತೆರವು;

ಖೋಪೋಲಿ (ರಾಯಗಡ ಜಿಲ್ಲೆ) – ಇಲ್ಲಿನ ಲವ್ಹೇಜ್ ಗ್ರಾಮದ ಸಮೀಪವಿರುವ ವೇತಾಳ ಮೂರ್ತಿ ದೇವಸ್ಥಾನವನ್ನು ಗುತ್ತಿಗೆದಾರನು ಜೆಸಿಬಿ ಸಹಾಯದಿಂದ ತೆರವುಗೊಳಿಸಿದನು. ಈ ಪ್ರಕರಣದಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಖೋಪೋಲಿ ನಗರಸಭೆಯ ಕಚೇರಿ ಕಡೆಗೆ ಬೃಹತ್ ಮೋರ್ಚಾ ನಡೆಸಿದರು. ‘ಸಂಬಂಧಿತ ಗುತ್ತಿಗೆದಾರನ ಕೆಲಸವನ್ನು ನಿಲ್ಲಿಸಿ ಆತನ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ನಗರಾಧ್ಯಕ್ಷ ಕುಲದೀಪಕ್ ಶೇಂಡೆ ಅವರಿಗೆ ಮನವಿ ಸಲ್ಲಿಸಲಾಯಿತು. ‘ಆಡಳಿತ ಮಂಡಳಿಯು ಈ ಪ್ರಕರಣದಲ್ಲಿ ತಕ್ಷಣವೇ ನ್ಯಾಯ ಒದಗಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡಲಾಗುವುದು’ ಎಂದು ಈ ಸಂದರ್ಭದಲ್ಲಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು. ಗ್ರಾಮದ ಸಮೀಪವಿರುವ ಸ್ಟೀಲ್ ಕಾರ್ಖಾನೆಯ ಹೆಚ್ಚುವರಿ ಜಾಗದ ಸಮತಟ್ಟು ಮಾಡುವ ಕಾರ್ಯ ನಡೆಯುತ್ತಿತ್ತು, ಅದಕ್ಕಾಗಿ ದೇವಸ್ಥಾನ ತೆರವುಗೊಳಿಸಿದ್ದಾನೆ.
ದೇವಸ್ಥಾನಕ್ಕಾಗಿ ಕನಿಷ್ಠ ಎರಡು ಗುಂಟೆ ಭೂಮಿಯನ್ನು ಒದಗಿಸಿಕೊಡಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ. ಗುತ್ತಿಗೆದಾರನು ನೈಸರ್ಗಿಕ ನೀರಿನ ಹರಿವಿನ ನಾಲಾ ಮತ್ತು ಕೆರೆಯನ್ನು ಮುಚ್ಚಿ ಹಾಕಿದ್ದಾನೆ ಎಂಬ ಆರೋಪ ಕೂಡ ಗ್ರಾಮಸ್ಥರು ಮಾಡಿದ್ದಾರೆ. ಇದರಿಂದಾಗಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗುವ ಸಾಧ್ಯತೆಯಿದೆ ಎಂಬ ಆತಂಕವನ್ನೂ ವ್ಯಕ್ತಪಡಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!