
ಕಾಠಮಂಡು (ನೇಪಾಳ) – ಭಾರತೀಯ ನೋಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನಗಳು ನೇಪಾಳ ಪ್ರವೇಶಿಸುವಾಗ ಪ್ರವೇಶ ಪರವಾನಗಿ ಪಡೆಯುವುದು ಕಡ್ಡಾಯ ಎಂದು ನೇಪಾಳ ಸರ್ಕಾರ ಘೋಷಿಸಿದೆ. ಇದರೊಂದಿಗೆ ನಿಗದಿತ ಅವಧಿಗೆ ಪಾಸ್ ಕೂಡ ನೀಡಲಾಗುವುದು. ಈ ಆಧಾರದ ಮೇಲೆ ಕೇವಲ ಕೇಂದ್ರ ಕಾರ್ಯಾಲಯದ ವ್ಯಾಪ್ತಿಯವರೆಗೆ ಮಾತ್ರ ಸಂಚರಿಸಲು ಅನುಮತಿ ನೀಡಲಾಗುವುದು, ಆದರೆ ಒಳಭಾಗಕ್ಕೆ ಪ್ರವೇಶಿಸುವಾಗ ಗಡಿ ಸುಂಕವನ್ನು ಪಾವತಿಸುವುದು ಅನಿವಾರ್ಯವಾಗಿದೆ.
ಭಾರತೀಯರಲ್ಲಿ ಆಕ್ರೋಶ
ಈ ನಿಯಮದಿಂದಾಗಿ ಕೆಲವು ಭಾರತೀಯ ನಾಗರಿಕರಲ್ಲಿ ಅಸಮಾಧಾನ ವ್ಯಕ್ತವಾಗಿದೆ. ‘ಭಾರತೀಯ ವಾಹನಗಳ ಮೇಲೆ ಹೆಚ್ಚು ಕಠಿಣ ನಿರ್ಬಂಧಗಳನ್ನು ಹೇರಲಾಗುತ್ತಿದೆ, ಆದರೆ ನೇಪಾಳಿ ವಾಹನಗಳು ಭಾರತದಲ್ಲಿ ಮುಕ್ತವಾಗಿ ಸಂಚರಿಸುತ್ತಿವೆ. ನೇಪಾಳಿ ವಾಹನಗಳ ಭಾರತ ಪ್ರವೇಶಕ್ಕೂ ಇಂತಹದೇ ನಿಯಮಗಳನ್ನು ಜಾರಿಗೆ ತರಬೇಕು’, ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ‘ಗಡಿ ಭಾಗದವರೆಗೆ ಸಂಚಾರಕ್ಕೆ ಅನುಮತಿ ನೀಡಲಿ; ಆದರೆ ಪ್ರವೇಶದ ಸಮಯದಲ್ಲಿ ತೆರಿಗೆ ಅಥವಾ ಪ್ರವೇಶ ಶುಲ್ಕವನ್ನು ಕಡ್ಡಾಯಗೊಳಿಸಬೇಕು’, ಎಂಬುದು ಭಾರತೀಯರ ಅಭಿಪ್ರಾಯವಾಗಿದೆ.
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಸ್ವದೇಶವೇ ಸರ್ವಸ್ವ !
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine