
ವಾರಣಾಸಿ (ಉತ್ತರ ಪ್ರದೇಶ) – ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಅವರಿಗೆ ಕಳುಹಿಸಲಾದ ಆಡಿಯೋ ಕ್ಲಿಪ್ನಲ್ಲಿ, ‘ಗೂಂಡಾ ಅತೀಕ್ ಅಹ್ಮದ್ನನ್ನು ಕೊಂದಂತೆಯೇ, ನಿಮ್ಮನ್ನೂ ಕೊಲ್ಲಲಾಗುವುದು’ ಎಂದು ಹೇಳಲಾಗಿದೆ. ಈ ಆಡಿಯೋದಲ್ಲಿ ೩೩ ಬಾರಿ ನಿಂದನೆಯನ್ನೂ ಮಾಡಲಾಗಿದೆ. ಶಂಕರಾಚಾರ್ಯರು ಗೋಮಾತಾ-ರಾಷ್ಟ್ರಮಾತಾ ಅಭಿಯಾನವನ್ನು ನಡೆಸುತ್ತಿದ್ದಾರೆ. ಇದರ ಅಡಿಯಲ್ಲಿ ಮೇ ೩ ರಿಂದ ಉತ್ತರ ಪ್ರದೇಶದಲ್ಲಿ ಯಾತ್ರೆಯು ಪ್ರಾರಂಭವಾಗಲಿದೆ. ಇದರಲ್ಲಿ ಅವರು ಗೋವುಗಳ ರಕ್ಷಣೆ ಮತ್ತು ಅವುಗಳಿಗೆ ಆಶ್ರಯ ಕೇಂದ್ರಗಳನ್ನು (ಗೋದಾಮ) ನಿರ್ಮಿಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಿದ್ದಾರೆ. ಈ ಯಾತ್ರೆಯಲ್ಲಿ ಅವರ ಮೇಲೆ ದಾಳಿ ಮಾಡುವ ಬೆದರಿಕೆ ಹಾಕಲಾಗಿದೆ.
ಶಂಕರಾಚಾರ್ಯರಿಗೆ ಈ ಹಿಂದೆಯೂ ಹಲವು ಬಾರಿ ಬೆದರಿಕೆಗಳು ಬಂದಿದ್ದವು. ಗೋರಕ್ಷಾ ಅಭಿಯಾನದಿಂದಾಗಿ ಕೆಲವರು ಅಸಮಾಧಾನಗೊಂಡಿದ್ದಾರೆ, ಇದೇ ಕಾರಣಕ್ಕಾಗಿ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಅವರ ಬೆಂಬಲಿಗರು ಹೇಳುತ್ತಾರೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ