ಮುಸ್ತಫಾನ ಮೊಬೈಲ್ನಲ್ಲಿ ಯುವತಿಯರ ಫೋಟೋ ಮತ್ತು ಅಶ್ಲೀಲ ವಿಡಿಯೋಗಳು ಪತ್ತೆ
ಮುಸ್ತಫಾನ ಬಂಧನ: ಕಠಿಣ ಕ್ರಮಕ್ಕೆ ಹಿಂದೂತ್ವನಿಷ್ಠರ ಆಗ್ರಹ

ಕೊಪ್ಪಳ – ಜಿಲ್ಲೆಯ ಅಳವಂಡಿ ಹೋಬಳಿಯ ಕಂಪ್ಲಿ ಗ್ರಾಮದ ಮುಸ್ತಫಾ ಎಂಬ ಮತಾಂಧ ಮುಸಲ್ಮಾನನು ಹಿಂದೂ ಯುವತಿಯರಿಗೆ ಚೇಷ್ಟೆ ಮಾಡುತ್ತಿರುವುದು ಮತ್ತು ಅವರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿರುವುದು ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲಾ ಆಸ್ಪತ್ರೆಯಲ್ಲಿ ಮುಸ್ತಫಾ ಹಿಂದೂ ಯುವತಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದಾಗ ಸಾರ್ವಜನಿಕರು ಆತನನ್ನು ತಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತನ ಮೊಬೈಲ್ ಫೋನ್ ಪರೀಕ್ಷಿಸಿದಾಗ ಅದರಲ್ಲಿ ಸುಮಾರು 16 ಯುವತಿಯರ ಫೋಟೋಗಳು ಮತ್ತು ಅಸಭ್ಯ ವಿಡಿಯೋಗಳು ಪತ್ತೆಯಾಗಿವೆ.
Molestation Case in Koppal
A man identified as Mustafa has been arrested after allegations of molesting Hindu girls.
Obscene videos and photos of victims were reportedly found on his phone.
Strong demands are rising for strict action.
Are women truly safe under Indian… pic.twitter.com/AeSdzO2LB6
— Sanatan Prabhat (@SanatanPrabhat) April 12, 2026
1. ಮುಸ್ತಫಾನ ಮೊಬೈಲ್ನಲ್ಲಿ ದೊರೆತ ಸಾಕ್ಷ್ಯಗಳ ಆಧಾರದ ಮೇಲೆ, ‘ಆತ ಅನೇಕ ಯುವತಿಯರನ್ನು ನಂಬಿಸಿ ಅವರಿಗೆ ವಂಚಿಸುತ್ತಿರಬಹುದು’ ಎಂಬ ಬಲವಾದ ಸಂಶಯ ವ್ಯಕ್ತವಾಗಿದೆ.
2. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹಿಂದೂತ್ವನಿಷ್ಠ ಸಂಘಟನೆಗಳು, ‘ಮುಸ್ತಫಾ ಮೇಲಿರುವ ಆರೋಪಗಳನ್ನು ಗಂಭೀರವಾಗಿ ತನಿಖೆ ಮಾಡಬೇಕು ಮತ್ತು ಆತನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಕೊಪ್ಪಳ ಪೊಲೀಸರನ್ನು ವಿನಂತಿಸಿವೆ. ಹಿಂದೂತ್ವನಿಷ್ಠರು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಡಾ. ರಾಮ್ ಅರಿಸಿದ್ಧಿ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ‘ಮುಸ್ತಫಾ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳದಿದ್ದರೆ ತೀವ್ರ ಹೋರಾಟ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.
3. ಆರೋಪಿ ಮುಸ್ತಫಾನನ್ನು ವಶಕ್ಕೆ ಪಡೆಯಲಾಗಿದ್ದು, ಆತನ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧೀಕ್ಷಕ ಡಾ. ರಾಮ್ ಅರಿಸಿದ್ಧಿ ತಿಳಿಸಿದ್ದಾರೆ. “ಎಲ್ಲಾ ಆಯಾಮಗಳಿಂದ ಪ್ರಕರಣವನ್ನು ಗಂಭೀರವಾಗಿ ಪರಿಶೀಲಿಸಿ ಶೀಘ್ರವೇ ತನಿಖೆ ಪೂರ್ಣಗೊಳಿಸಿ ಕ್ರಮ ಕೈಗೊಳ್ಳಲಾಗುವುದು,” ಎಂದು ಪೊಲೀಸರು ಭರವಸೆ ನೀಡಿದ್ದಾರೆ.
4. ಈ ಘಟನೆಯ ಬಗ್ಗೆ ಕೊಪ್ಪಳ ಜಿಲ್ಲೆಯ ನಾಗರಿಕರು ಮತ್ತು ಹಿಂದೂತ್ವನಿಷ್ಠ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ‘ಯುವತಿಯರಿಗೆ ವಂಚಿಸುವ ಮತ್ತು ಅಸಭ್ಯವಾಗಿ ವರ್ತಿಸುವ ಇಂತಹ ವ್ಯಕ್ತಿಗಳಿಗೆ ಕಠಿಣ ಶಿಕ್ಷೆಯಾಗಬೇಕು’ ಎಂಬುದು ಅವರ ಆಗ್ರಹವಾಗಿದೆ. ಜಿಲ್ಲಾ ಆಸ್ಪತ್ರೆಯಂತಹ ಸಾರ್ವಜನಿಕ ಸ್ಥಳದಲ್ಲಿ ಇಂತಹ ಘಟನೆ ನಡೆದಿರುವುದು ಅತ್ಯಂತ ಆತಂಕಕಾರಿ ವಿಷಯ ಎಂದು ಹೇಳಲಾಗುತ್ತಿದೆ.
5. ಕೊಪ್ಪಳ ಜಿಲ್ಲೆಯಲ್ಲಿ ಯುವತಿಯರೊಂದಿಗೆ ಅಸಭ್ಯ ವರ್ತನೆ, ವಂಚನೆ ಮತ್ತು ‘ಲವ್ ಜಿಹಾದ್’ನಂತಹ ಆರೋಪಗಳು ಕೇಳಿಬರುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಇಂತಹ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಕಠಿಣ ಕ್ರಮ ಜರುಗಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !
ಬೆಂಗಳೂರಿನಲ್ಲಿ ಕಸ ಹಾಯುವ ಸೈಬುಲ್ನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ!
ಗುಜರಾತ್ನಲ್ಲಿ ನುಸುಳುಕೋರರ ವಿರುದ್ಧ ‘ಆಪರೇಷನ್ ಡೆಲ್ಟಾ ಹಂಟ್’: 2 ದಿನಗಳಲ್ಲಿ 501 ಬಾಂಗ್ಲಾದೇಶಿ ನಾಗರಿಕರ ಬಂಧನ !
ಕೇರಳಕ್ಕೆ ಮುಂಗಾರು ಮಳೆಯು ಆಗಮನ !
ಆರೋಪಿ ಶಾಹಿನಾ ರಫೀಕ್ ಇವಳನ್ನು ಪುಣೆಗೆ ತನಿಖೆಗಾಗಿ ಕರೆಯಿಸಲಾಗಿದೆ
ಬರಕತ ಉಲ್ಲಾ ವಿಶ್ವವಿದ್ಯಾಲಯದ ಹೆಸರು ‘ವಾಗ್ದೇವಿ ಭೋಜಪಾಲ ವಿಶ್ವವಿದ್ಯಾಲಯ’ ಎಂದು ಬದಲಾಗಲಿದೆ !