
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ರಂಗಪುರದ ದಾಸಪಾಡಾ ಮಾರುಕಟ್ಟೆ ಪ್ರದೇಶದಲ್ಲಿ ಏಪ್ರಿಲ್ 11 ರಂದು ರಕೀಬ್ ಹಸನ್ ಎಂಬ ಯುವಕನ ಕೊಲೆಯಾದ ನಂತರ, ಮುಸ್ಲಿಂ ಗುಂಪೊಂದು ಹಿಂದೂಗಳ ಮನೆ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ದಾರಿ ತಪ್ಪಿಸುವ ಉದ್ದೇಶದಿಂದ ಈ ಕೃತ್ಯವನ್ನು ಮೂರನೇ ವ್ಯಕ್ತಿಗಳು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಕೀಬ್ ಹಸನ್ ಅವರ ತಾಯಿ ಸ್ಪಷ್ಟಪಡಿಸಿರುವಂತೆ, ಈ ಕೊಲೆಗೂ ಹಿಂದೂ ಸಮಾಜಕ್ಕೂ ಯಾವುದೇ ಸಂಬಂಧವಿಲ್ಲ. ಮಾದಕ ವಸ್ತುಗಳ ಸಾಗಾಟಗಾರ ಮೊಹಮ್ಮದ್ ಮೊಮಿನ್ ಎಂಬಾತ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರಕೀಬ್ನನ್ನು ಹತ್ಯೆ ಮಾಡಿದ್ದನು.
ಇಸ್ಲಾಂಅನ್ನು ಅವಮಾನಿಸಿದ ಆರೋಪ: ಮೌಲ್ವಿ ಹತ್ಯೆ, ಹಿಂದೂಗಳ ಮನೆಗಳ ಮೇಲೂ ದಾಳಿ
ಕುಷ್ಟಿಯಾದಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ, ಮುಸ್ಲಿಂ ಗುಂಪೊಂದು ಶಾಲಾ ಶಿಕ್ಷಕ ಮೌಲ್ವಿ ಶಮೀಮ್ ರಜಾ ಜಹಾಂಗೀರ್ ಅವರನ್ನು ಹತ್ಯೆ ಮಾಡಿದೆ. ದಾಳಿಕೋರರು ಅವರ ದರ್ಬಾರ್ಗೆ ಬೆಂಕಿ ಹಚ್ಚಿದ್ದಲ್ಲದೆ, ಅವರ ಏಳು ಅನುಯಾಯಿಗಳನ್ನು ಗಂಭೀರವಾಗಿ ಗಾಯಗೊಳಿಸಿದ್ದಾರೆ.
ಇಲ್ಲಿಯೂ ಸಹ ಕೆಲವು ಹಿಂದೂಗಳ ಮನೆಗಳನ್ನು ಗುರಿ ಮಾಡಿ ದಾಳಿ ನಡೆಸಲಾಗಿದೆ.
ಈ ವರ್ಷದ ಮೊದಲ 3 ತಿಂಗಳಲ್ಲಿ ಅಲ್ಪಸಂಖ್ಯಾತರ ಮೇಲೆ 133 ದಾಳಿಗಳು
ಬಾಂಗ್ಲಾದೇಶದ *’ಹಿಂದೂ ಬೌದ್ಧ ಕ್ರಿಶ್ಚಿಯನ್ ಐಕ್ಯತಾ ಮಂಡಳಿ’*ಯ ಅಂಕಿಅಂಶಗಳ ಪ್ರಕಾರ, ಈ ವರ್ಷದ ಮೊದಲ 3 ತಿಂಗಳಲ್ಲೇ 133 ಧಾರ್ಮಿಕ ಹಿಂಸಾಚಾರದ ಘಟನೆಗಳು ದಾಖಲಾಗಿವೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಾಧಿತ ಪ್ರದೇಶಗಳಲ್ಲಿ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯಪಡೆಯನ್ನು (Rapid Action Battalion) ನಿಯೋಜಿಸಲಾಗಿದೆ.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಕೋರ್ಟ್ ಆದೇಶ: ಕಾಶಿಯಲ್ಲಿ ರೈಲ್ವೆ ಜಾಗದ ಮಸೀದಿ ತೆರವು