
ಢಾಕಾ (ಬಾಂಗ್ಲಾದೇಶ) – ಬಾಂಗ್ಲಾದೇಶದ ರಂಗಪುರದ ದಾಸಪಾಡಾ ಮಾರುಕಟ್ಟೆ ಪ್ರದೇಶದಲ್ಲಿ ಏಪ್ರಿಲ್ 11 ರಂದು ರಕೀಬ್ ಹಸನ್ ಎಂಬ ಯುವಕನ ಕೊಲೆಯಾದ ನಂತರ, ಮುಸ್ಲಿಂ ಗುಂಪೊಂದು ಹಿಂದೂಗಳ ಮನೆ ಮತ್ತು ಅಂಗಡಿಗಳನ್ನು ಧ್ವಂಸಗೊಳಿಸಿದೆ. ಪೊಲೀಸರ ಮಾಹಿತಿ ಪ್ರಕಾರ, ದಾರಿ ತಪ್ಪಿಸುವ ಉದ್ದೇಶದಿಂದ ಈ ಕೃತ್ಯವನ್ನು ಮೂರನೇ ವ್ಯಕ್ತಿಗಳು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಕೀಬ್ ಹಸನ್ ಅವರ ತಾಯಿ ಸ್ಪಷ್ಟಪಡಿಸಿರುವಂತೆ, ಈ ಕೊಲೆಗೂ ಹಿಂದೂ ಸಮಾಜಕ್ಕೂ ಯಾವುದೇ ಸಂಬಂಧವಿಲ್ಲ. ಮಾದಕ ವಸ್ತುಗಳ ಸಾಗಾಟಗಾರ ಮೊಹಮ್ಮದ್ ಮೊಮಿನ್ ಎಂಬಾತ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರಕೀಬ್ನನ್ನು ಹತ್ಯೆ ಮಾಡಿದ್ದನು.
ಇಸ್ಲಾಂಅನ್ನು ಅವಮಾನಿಸಿದ ಆರೋಪ: ಮೌಲ್ವಿ ಹತ್ಯೆ, ಹಿಂದೂಗಳ ಮನೆಗಳ ಮೇಲೂ ದಾಳಿ
ಕುಷ್ಟಿಯಾದಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ, ಮುಸ್ಲಿಂ ಗುಂಪೊಂದು ಶಾಲಾ ಶಿಕ್ಷಕ ಮೌಲ್ವಿ ಶಮೀಮ್ ರಜಾ ಜಹಾಂಗೀರ್ ಅವರನ್ನು ಹತ್ಯೆ ಮಾಡಿದೆ. ದಾಳಿಕೋರರು ಅವರ ದರ್ಬಾರ್ಗೆ ಬೆಂಕಿ ಹಚ್ಚಿದ್ದಲ್ಲದೆ, ಅವರ ಏಳು ಅನುಯಾಯಿಗಳನ್ನು ಗಂಭೀರವಾಗಿ ಗಾಯಗೊಳಿಸಿದ್ದಾರೆ.
ಇಲ್ಲಿಯೂ ಸಹ ಕೆಲವು ಹಿಂದೂಗಳ ಮನೆಗಳನ್ನು ಗುರಿ ಮಾಡಿ ದಾಳಿ ನಡೆಸಲಾಗಿದೆ.
ಈ ವರ್ಷದ ಮೊದಲ 3 ತಿಂಗಳಲ್ಲಿ ಅಲ್ಪಸಂಖ್ಯಾತರ ಮೇಲೆ 133 ದಾಳಿಗಳು
ಬಾಂಗ್ಲಾದೇಶದ *’ಹಿಂದೂ ಬೌದ್ಧ ಕ್ರಿಶ್ಚಿಯನ್ ಐಕ್ಯತಾ ಮಂಡಳಿ’*ಯ ಅಂಕಿಅಂಶಗಳ ಪ್ರಕಾರ, ಈ ವರ್ಷದ ಮೊದಲ 3 ತಿಂಗಳಲ್ಲೇ 133 ಧಾರ್ಮಿಕ ಹಿಂಸಾಚಾರದ ಘಟನೆಗಳು ದಾಖಲಾಗಿವೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಾಧಿತ ಪ್ರದೇಶಗಳಲ್ಲಿ ಪೊಲೀಸ್ ಮತ್ತು ಕ್ಷಿಪ್ರ ಕಾರ್ಯಪಡೆಯನ್ನು (Rapid Action Battalion) ನಿಯೋಜಿಸಲಾಗಿದೆ.
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!
ಆದಿವಾಸಿಗಳ ಮನೆ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ: ಪೊಲೀಸ್ ಮಧ್ಯಸ್ಥಿಕೆ ಬಳಿಕ ಕೆಲಸ ಪುನರಾರಂಭ
ಮಾನವ ಹಕ್ಕುಗಳ ಉಲ್ಲಂಘನೆ ವಿರುದ್ಧ ಧ್ವನಿ ಎತ್ತಿದ ಮೆಹರಂಗ್ ಬಲೋಚ್ ಗೆ ಪಾಕಿಸ್ತಾನದಿಂದ ಜೀವಾವಧಿ ಶಿಕ್ಷೆ !
ಅಕೋಲಾ: ಗೋರಕ್ಷಕರೊಂದಿಗೆ ವಾದಕ್ಕಿಳಿದ ಮುಸಲ್ಮಾನರು; ಮುಸಲ್ಮಾನನನ್ನು ಬಿಟ್ಟಿದ್ದಾರೆಂದು ಆರೋಪಿಸಿದ ಭಾಜಪ!
ಇರಾನ್ ಮೇಲಿನ ನಿರ್ಬಂಧಗಳಿಗೆ 60 ದಿನಗಳ ವಿನಾಯಿತಿ ನೀಡಿದ ಅಮೆರಿಕ!