ಮಕ್ಕಳ ಕಳ್ಳಸಾಗಣೆ ಶಂಕೆ, ೮ ಜನರ ಬಂಧನ
ಲಾತೂರ್ ನ ಮದರಸಾದಲ್ಲಿ ಶಿಕ್ಷಣಕ್ಕಾಗಿ ಕರೆದೊಯ್ಯಲಾಗುತ್ತಿದೆ ಎಂದು ಸದ್ದಾಂ ಎಂಬ ವ್ಯಕ್ತಿಯ ಹೇಳಿಕೆ

ಪುಣೆ – ಬಿಹಾರದ ರಾಜಧಾನಿ ಪಾಟ್ಲಿಪುತ್ರದಿಂದ ಪುಣೆಗೆ ತೆರಳುತ್ತಿದ್ದ ೧೬೭ ಅಪ್ರಾಪ್ತ ಮುಸಲ್ಮಾನ ಮಕ್ಕಳನ್ನು ಏಪ್ರಿಲ್ ೧೧ ರ ರಾತ್ರಿ ಮಧ್ಯಪ್ರದೇಶದ ಕಟ್ನಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ. ಪಾಟ್ನಾ-ಪೂರ್ಣಾ ಎಕ್ಸಪ್ರೆಸ್ ನಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಈ ಪ್ರಕರಣದಲ್ಲಿ ೮ ಜನರನ್ನು ಬಂಧಿಸಲಾಗಿದೆ. ರೈಲ್ವೆ ಭದ್ರತಾ ಪಡೆ ಮತ್ತು ರೈಲ್ವೆ ಪೊಲೀಸರ ಸಹಯೋಗದೊಂದಿಗೆ ಈ ಮಕ್ಕಳನ್ನು ರೈಲಿನಿಂದ ರಕ್ಷಿಸಲಾಯಿತು. ವಿಚಾರಣೆಯ ಸಮಯದಲ್ಲಿ, ಈ ಎಲ್ಲಾ ಮಕ್ಕಳು ಬಿಹಾರದ ಅರರಿಯಾದಿಂದ ಮಹಾರಾಷ್ಟ್ರದ ಲಾತೂರ್ ನಲ್ಲಿರುವ ಮದರಸಾವೊಂದರಲ್ಲಿ ಶಿಕ್ಷಣ ಪಡೆಯಲು ಪ್ರಯಾಣಿಸುತ್ತಿದ್ದರು ಎಂಬುದು ತಿಳಿದುಬಂದಿದೆ. ಮಕ್ಕಳ ಕಳ್ಳಸಾಗಣೆ ನಡೆಯುತ್ತಿರುವ ಬಗ್ಗೆ ಲಭ್ಯವಾದ ಗುಪ್ತ ಮಾಹಿತಿಯ ಆಧಾರದ ಮೇಲೆ ಮಕ್ಕಳ ಕಲ್ಯಾಣ ಸಮಿತಿಯ ತಂಡವು ಈ ಕಾರ್ಯಾಚರಣೆ ನಡೆಸಿದೆ.
ಅರರಿಯಾದಿಂದ ಲಾತೂರ್ ನ ಮದರಸಾಗೆ ಈ ಮಕ್ಕಳನ್ನು ಕರೆದೊಯ್ಯುತ್ತಿದ್ದ ಸದ್ದಾಂ ಎಂಬ ವ್ಯಕ್ತಿಯು, ಕಳೆದ ೧೦ ವರ್ಷಗಳಿಂದ ತಾನು ಮಕ್ಕಳನ್ನು ಲಾತೂರ್ ನ ಮದರಸಾಗಳಿಗೆ ಶಿಕ್ಷಣಕ್ಕಾಗಿ ಕರೆದೊಯ್ಯುತ್ತಿರುವುದಾಗಿ ಹೇಳಿದ್ದಾನೆ. ಈ ಬಾರಿಯೂ ಸುಮಾರು ೧೦೦ ಮಕ್ಕಳನ್ನು ಅವರ ಪೋಷಕರ ಪೂರ್ಣ ಸಮ್ಮತಿಯೊಂದಿಗೆ ಕರೆದೊಯ್ಯುತ್ತಿದ್ದೆ ಎಂದು ಅವನು ತಿಳಿಸಿದ್ದಾನೆ.
ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಮಕ್ಕಳ ಸಂರಕ್ಷಣಾ ಅಧಿಕಾರಿ ಮನೀಶ್ ತಿವಾರಿ ಅವರು, ರೈಲಿನಲ್ಲಿ ೧೦೦ ಕ್ಕೂ ಹೆಚ್ಚು ಮಕ್ಕಳನ್ನು ಕಳ್ಳಸಾಗಣೆ ಮಾಡುವ ಸಾಧ್ಯತೆಯ ಬಗ್ಗೆ ಗುಪ್ತ ಮಾಹಿತಿ ಲಭಿಸಿತ್ತು ಎಂದು ತಿಳಿಸಿದರು. ಈ ಮಾಹಿತಿಯ ಆಧಾರದ ಮೇಲೆ ಮಕ್ಕಳನ್ನು ರಕ್ಷಿಸಲಾಗಿದ್ದು, ಅವರ ವಿಚಾರಣೆ ನಡೆಯುತ್ತಿದೆ.
ವಿಚಾರಣೆಯ ಸಮಯದಲ್ಲಿ ಮಕ್ಕಳು ತಾವು ಲಾತೂರ್ ನ ಮದರಸಾದಲ್ಲಿ ಶಿಕ್ಷಣ ಪಡೆಯಲು ಪ್ರಯಾಣಿಸುತ್ತಿದ್ದೆವು ಎಂದು ಹೇಳಿದ್ದಾರೆ. ಸದ್ಯ ಈ ಪ್ರಕರಣದ ಗಂಭೀರತೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು ಆಯಾಮದಿಂದಲೂ ಆಳವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ.
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ
ಕ್ಷುಲ್ಲಕ ಕಾರಣಕ್ಕೆ ಹಿಂದೂ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಮತಾಂಧ ರಿಕ್ಷಾ ಚಾಲಕ!