ನಾಶಿಕ್ನ ಸಂಸ್ಥೆಯಲ್ಲಿ ಲೈಂಗಿಕ ಕಿರುಕುಳದ ಪ್ರಕರಣ
ಹಿರಿಯ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ ಎಂದು ಸ್ಪಷ್ಟನೆ!

ನಾಶಿಕ್ – ‘ಟಾಟಾ ಸನ್ಸ್’ ಅಧ್ಯಕ್ಷ ಎನ್. ಚಂದ್ರಶೇಖರನ್ ಅವರು ಇಲ್ಲಿನ ‘ಟಿ.ಸಿ.ಎಸ್.’ ಸಂಸ್ಥೆಯಲ್ಲಿ ನಡೆದ ಲೈಂಗಿಕ ಕಿರುಕುಳದ ಆರೋಪಗಳನ್ನು ಗಂಭೀರ ಹಾಗೂ ಚಿಂತಾಜನಕ ಎಂದು ಹೇಳಿದ್ದಾರೆ. ಅವರು, “ಈ ಪ್ರಕರಣದ ತನಿಖೆಯನ್ನು ಹಿರಿಯ ಅಧಿಕಾರಿಗಳು ನಡೆಸುತ್ತಿದ್ದಾರೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಟಾಟಾ ಗ್ರೂಪ್ ಯಾವುದೇ ರೀತಿಯ ಅಸಭ್ಯ ವರ್ತನೆ ಅಥವಾ ಒತ್ತಡದ ನೀತಿಯನ್ನು ಸಹಿಸುವುದಿಲ್ಲ” ಎಂದರು.
🚨 TCS Nashik Case Update 🚨
Tata Sons Chairman N. Chandrasekaran has called the sexual harassment and forced conversion allegations at the TCS Nashik office “gravely concerning and anguishing.”
He assured strict action, reaffirmed a zero-tolerance policy, and said a senior-led… https://t.co/TdOYEFN0Y2 pic.twitter.com/KlBAj5FDLf
— Sanatan Prabhat (@SanatanPrabhat) April 14, 2026
ಚಂದ್ರಶೇಖರನ್ ಅವರು ಮಾತು ಮುಂದುವರೆಸಿ, “ಈ ತನಿಖೆಯು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಬ್ರಮಣಿಯನ್ ಅವರ ನೇತೃತ್ವದಲ್ಲಿ ನಡೆಯುತ್ತಿದೆ. ಇದರ ಉದ್ದೇಶ ಸಂಪೂರ್ಣ ಪ್ರಕರಣದ ಸತ್ಯವನ್ನು ಹೊರಹಾಕುವುದು ಮತ್ತು ಜವಾಬ್ದಾರಿಯುತ ವ್ಯಕ್ತಿಗಳನ್ನು ಗುರುತಿಸುವುದಾಗಿದೆ. ಈ ಪ್ರಕರಣವನ್ನು ಸಂಸ್ಥೆಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಉದ್ಯೋಗಿಗಳ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಮತ್ತು ತನಿಖಾ ಸಂಸ್ಥೆಗಳಿಗೆ ಪೂರ್ಣ ಸಹಕಾರ ನೀಡಲಾಗುತ್ತಿದೆ” ಎಂದು ಹೇಳಿದರು.
ಯಾವುದೇ ರೀತಿಯ ಕಿರುಕುಳದ ವಿರುದ್ಧ ಸಂಸ್ಥೆಯು ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅನುಸರಿಸುತ್ತಿದೆ ಎಂದು ಸ್ಪಷ್ಟಪಡಿಸಲಾಗಿದೆ. ಸಂಸ್ಥೆಯಲ್ಲಿನ ಪ್ರಕರಣದ ಮಾಹಿತಿ ತಿಳಿಯುತ್ತಿದ್ದಂತೆಯೇ ಸಂಬಂಧಪಟ್ಟ ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!