
ಅಂಡಮಾನ್ – ಇಲ್ಲಿನ ಸಮುದ್ರದಲ್ಲಿ ನೌಕೆಯೊಂದು ಮುಗುಚಿದ್ದರಿಂದ ೨೫೦ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಈ ನೌಕೆಯಲ್ಲಿ ೨೮೦ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ನಾಗರಿಕರು ಪ್ರಯಾಣಿಸುತ್ತಿದ್ದರು. ಇದರಲ್ಲಿ ಸಣ್ಣ ಮಕ್ಕಳೂ ಸೇರಿದ್ದರು. ಈ ನೌಕೆಯು ಏಪ್ರಿಲ್ ೪ ರಂದು ದಕ್ಷಿಣ ಬಾಂಗ್ಲಾದೇಶದ ಟೆಕ್ನಾಫ್ನಿಂದ ಮಲೇಷ್ಯಾದತ್ತ ಪ್ರಯಾಣ ಬೆಳೆಸಿತ್ತು. ಜೋರಾದ ಗಾಳಿ, ಅಬ್ಬರಿಸುವ ಸಮುದ್ರ ಮತ್ತು ಸಾಮರ್ಥ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರಿದ್ದ ಕಾರಣ ಅಂಡಮಾನ್ ಸಮುದ್ರದಲ್ಲಿ ಈ ನೌಕೆ ಮುಳುಗಿದೆ ಎಂದು ವಿಶ್ವಸಂಸ್ಥೆಯ ಹೇಳಿಕೆಯಲ್ಲಿ ತಿಳಿಸಲಾಗಿದೆ.
ವಿದೇಶಗಳಲ್ಲಿ ಉತ್ತಮ ಸಂಬಳದ ಕೆಲಸದ ಆಮಿಷ ಮತ್ತು ಹಲವು ಬಾರಿ ಮಾನವ ಕಳ್ಳಸಾಗಣೆ ಮಾಡುವ ತಂಡಗಳು ಹರಡುವ ತಪ್ಪು ಮಾಹಿತಿಯಿಂದಾಗಿ ರೋಹಿಂಗ್ಯಾ ಮತ್ತು ಬಾಂಗ್ಲಾದೇಶದ ನಾಗರಿಕರು ಇಂತಹ ದೊಡ್ಡ ಅಪಾಯಗಳನ್ನು ಎದುರಿಸಲು ಮುಂದಾಗುತ್ತಾರೆ. ಈ ಘಟನೆಯು ದೀರ್ಘಕಾಲದ ಸ್ಥಳಾಂತರದ ಗಂಭೀರ ಪರಿಣಾಮಗಳನ್ನು ತೋರಿಸುತ್ತದೆ ಎಂದು ವಿಶ್ವಸಂಸ್ಥೆ ಮತ್ತು ಅಂತರಾಷ್ಟ್ರೀಯ ವಲಸೆ ಸಂಸ್ಥೆ ಹೇಳಿವೆ.
ಪಾಕಿಸ್ತಾನವನ್ನು ಶ್ಲಾಘಿಸಿದ ಅಮೆರಿಕದ ಉಪಾಧ್ಯಕ್ಷರ ವಿರುದ್ಧ ಅವರದ್ದೇ ಪಕ್ಷದ ಸಂಸದರು ಆಕ್ರೋಶ!
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಯುಕ್ರೇನ್-ರಷ್ಯಾ ಯುದ್ಧದಲ್ಲಿ ಭಾರತೀಯ ಸೈನಿಕರನ್ನು ಶಾಂತಿ ಕಾರ್ಯಾಚರಣೆಗಾಗಿ ಕಳುಹಿಸುವ ಉಪರಾಷ್ಟ್ರಪತಿ ಜೆ.ಡಿ. ವ್ಯಾನ್ಸ್ ಅವರ ಪ್ರಸ್ತಾವನೆ : Indian Peace Keeping for Ukraine
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ವಿಚಾರದಲ್ಲಿ ಪಾಕಿಸ್ತಾನದಿಂದ ಕಾಶ್ಮೀರ ಗಡಿಯಲ್ಲಿ 35 ಡ್ರೋನ್ ವಿರೋಧಿ ಘಟಕಗಳ ನಿಯೋಜನೆ! : Indus Water Treaty Crisis
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers