೫ ನಿರ್ವಾಹಕರ ಅಮಾನತು!

ಬೆಂಗಳೂರು – ರಾಜ್ಯದ ಚಿಕ್ಕಮಗಳೂರಿನಲ್ಲಿ ನಿರ್ವಾಹಕರೊಬ್ಬರು ಪುರುಷ ಪ್ರಯಾಣಿಕರಿಗೆ ಮಹಿಳೆಯರ ಉಚಿತ ಪ್ರಯಾಣದ, ಅಂದರೆ ‘ಶಕ್ತಿ ಯೋಜನೆ’ಯ ಟಿಕೆಟ್ ನೀಡಿ ಅವರಿಂದ ಹಣ ಸುಲಿಗೆ ಮಾಡಿರುವ ಘಟನೆ ಈ ಹಿಂದೆ ಬೆಳಕಿಗೆ ಬಂದಿತ್ತು. ಇದೀಗ ಬೆಂಗಳೂರಿನಲ್ಲೂ ಪುರುಷರಿಗೆ ಈ ರೀತಿ ಟಿಕೆಟ್ ನೀಡಿ ಅವರಿಂದ ಹಣ ಪಡೆದು ‘ಬಿಎಂಟಿಸಿ’ಗೆ (ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ) ವಂಚನೆ ಮಾಡಿರುವ ೫ ಬಸ್ ನಿರ್ವಾಹಕರನ್ನು ಅಮಾನತು ಮಾಡಲಾಗಿದೆ. ಸೂರ್ಯನಾರಾಯಣ, ಬೊಮ್ಮಲಿಂಗೇಶ್, ಬ್ರಿಜೇಶ್ ಬಾಬು, ಮೋಹನ್ ಮತ್ತು ಎನ್. ಪ್ರಕಾಶ್ ಅಮಾನತಾದವರಾಗಿದ್ದಾರೆ.
ತನಿಖೆಯ ವೇಳೆ, ಬಸ್ ನಿರ್ವಾಹಕರು ಕನ್ನಡ ಓದಲು ಬಾರದ ಪುರುಷ ಪ್ರಯಾಣಿಕರಿಗೆ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆಯ ‘ಕ್ಯೂಆರ್ ಕೋಡ್’ (QR Code) ನೀಡಿ, ಅದಕ್ಕೆ ಪ್ರಯಾಣ ದರದ ಹಣವನ್ನು ಕಳುಹಿಸುವಂತೆ ಹೇಳುತ್ತಿದ್ದರು ಹಾಗೂ ಅದಕ್ಕೆ ಪ್ರತಿಯಾಗಿ ಪ್ರಯಾಣಿಕರಿಗೆ ‘ಶಕ್ತಿ ಯೋಜನೆ’ಯ ಶೂನ್ಯ ದರದ ಟಿಕೆಟ್ ನೀಡುತ್ತಿದ್ದರು ಎಂಬುದು ತಿಳಿದುಬಂದಿದೆ. ಈ ಮೂಲಕ ನಿರ್ವಾಹಕರು ಲಕ್ಷಾಂತರ ರೂಪಾಯಿ ಸಂಪಾದಿಸಿದ್ದಾರೆ.
‘ಶಕ್ತಿ ಯೋಜನೆ’ ಎಂದರೇನು?
ರಾಜ್ಯ ಸರಕಾರದ ‘ಶಕ್ತಿ ಯೋಜನೆ’ಯು ರಾಜ್ಯದ ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಒದಗಿಸುವ ೫ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾಗಿದೆ. ಜೂನ್ ೧೧, ೨೦೨೩ ರಿಂದ ಜಾರಿಗೆ ಬಂದಿರುವ ಈ ಯೋಜನೆಯು, ಎಲ್ಲಾ ರಾಜ್ಯಮಟ್ಟದ ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಗಳಲ್ಲಿ (ವೇಗದೂತ ಸೇರಿದಂತೆ) ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸುವ ಅವಕಾಶವನ್ನು ನೀಡುತ್ತದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !