
ಶಿಲ್ಲಾಂಗ (ಮೇಘಾಲಯ) – ರಾಜಧಾನಿ ಶಿಲ್ಲಾಂಗ್ ನ ಲೋವರ್ ಲುಂಪಾರಿಂಗ್ ಪ್ರದೇಶದಲ್ಲಿ ಖಾಸಿ ವಿದ್ಯಾರ್ಥಿ ಸಂಘಟನೆಯು 2026ರ ಏಪ್ರಿಲ್ 14 ರಂದು ಅಕ್ರಮವಾಗಿ ನಿರ್ಮಿಸಲಾಗಿದ್ದ ಮಸೀದಿಯನ್ನು ಬಂದ್ ಮಾಡಿದ್ದರಿಂದ ಉದ್ವಿಗ್ನತೆ ನಿರ್ಮಾಣವಾಗಿದೆ. ಅನೇಕ ನಾಗರಿಕರು ಸಂಘಟನೆಯ ಈ ಕ್ರಮವನ್ನು ಬೆಂಬಲಿಸುತ್ತಿದ್ದು, ಅಕ್ರಮ ನಿರ್ಮಾಣವನ್ನು ತೆರವುಗೊಳಿಸಿ ಶಾಂತಿಯುತ ಮತ್ತು ಕಾನೂನುಬದ್ಧ ಮಾರ್ಗದ ಮೂಲಕ ಪರಿಹಾರ ಕಂಡುಕೊಳ್ಳುವ ಪರವಾಗಿದ್ದಾರೆ.
ಮಸೀದಿಯ ನಿರ್ಮಾಣವನ್ನು ಸ್ಥಳೀಯ ಆಡಳಿತದ ಅನುಮತಿ ಪಡೆಯದೆಯೇ ಮಾಡಲಾಗಿತ್ತು ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ. ಇದರ ಬಗ್ಗೆ ಸ್ಥಳೀಯ ಸಂಸ್ಥೆಗಳಿಗೂ ಮಾಹಿತಿ ಇರಲಿಲ್ಲ. ಈ ಭೂಮಿಯು ಮೂಲತಃ ಸ್ಮಶಾನದ ಉಸ್ತುವಾರಿ ನೋಡಿಕೊಳ್ಳುವ ಕಾವಲುಗಾರನ ವಾಸಕ್ಕಾಗಿ ನೀಡಲಾಗಿತ್ತು, ಅದರ ಮೇಲೆ ಅಕ್ರಮವಾಗಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಸಂಘಟನೆಯು ದಾವೆ ಮಾಡಿದೆ.
ಆಡಳಿತದ ನೋಟಿಸ್ ನಂತರವೂ ಕ್ರಮ ಕೈಗೊಂಡಿಲ್ಲ!
ಸಂಘಟನೆಯ ಪ್ರಕಾರ, ಸ್ಥಳೀಯ ಆಡಳಿತವು ಈ ಕಟ್ಟಡವನ್ನು ತೆರವುಗೊಳಿಸಲು ನೋಟಿಸ್ ನೀಡಿದ್ದರೂ ಸಹ ಅದನ್ನು ತೆಗೆದುಹಾಕಿರಲಿಲ್ಲ. ತದನಂತರ ಅನಿವಾರ್ಯವಾಗಿ ಸಂಘಟನೆಯು ಮಧ್ಯಪ್ರವೇಶಿಸಿ ಮಸೀದಿಯನ್ನು ಬಂದ್ ಮಾಡಬೇಕಾಯಿತು. ಮಸೀದಿಯ ಇಮಾಮ್ ಗೆ (ಮಸೀದಿಯಲ್ಲಿ ಪ್ರಾರ್ಥನೆ ಮಾಡಿಸುವವರು) ತಕ್ಷಣವೇ ಜಾಗವನ್ನು ಖಾಲಿ ಮಾಡುವಂತೆ ಸಂಘಟನೆಯು ಸೂಚಿಸಿದೆ. ಇಮಾಮ್ ಅಲ್ಲಿ ವಾಸಿಸುವುದು ಅಯೋಗ್ಯವಾಗಿದೆ ಮತ್ತು ಆ ಸ್ಥಳದಲ್ಲಿ ಧಾರ್ಮಿಕ ಚಟುವಟಿಕೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಹೇಳಲಾಗಿದೆ.
ಮೇಘಾಲಯದ ಬುಡಕಟ್ಟು ಪ್ರದೇಶಗಳಿಗೆ ಅನ್ವಯವಾಗುವ ಕಾನೂನುಗಳು ಮತ್ತು ಸಂಪ್ರದಾಯಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬುದು ಸಂಘಟನೆಯ ಆಗ್ರಹವಾಗಿದೆ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !