ಪಾರ್ಶ್ವವಾಯು ಪೀಡಿತ ತಾಯಿಯನ್ನೇ ಕೊಂದ ಮಗ: ಮನುಷ್ಯತ್ವ ಮರೆತ ಮೃಗೀಯ ವರ್ತನೆ !

ಬೆಂಗಳೂರು – ನಗರದ ಆರ್.ಆರ್. ನಗರ ಪ್ರದೇಶದಲ್ಲಿ 42 ವರ್ಷದ ವೆಂಕಟೇಶ್ ಎಂಬ ವ್ಯಕ್ತಿ ತನ್ನ ವೃದ್ಧ ತಾಯಿಯನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ. ಆತನ ತಾಯಿ ಕಳೆದ 4-5 ವರ್ಷಗಳಿಂದ ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದರು. ತಾಯಿಯ ದೀರ್ಘಕಾಲದ ಅನಾರೋಗ್ಯದಿಂದ ಬೇಸತ್ತ ವೆಂಕಟೇಶ್, ಆಕೆಯನ್ನು ನಾಲ್ಕನೇ ಮಹಡಿಯಿಂದ ಕೆಳಕ್ಕೆ ತಳ್ಳಿ ಕೊಲೆ ಮಾಡಿದ್ದಾನೆ. ಮೃತ ಮಹಿಳೆಯನ್ನು 72 ವರ್ಷದ ಸಾವಿತ್ರಮ್ಮ ಎಂದು ಗುರುತಿಸಲಾಗಿದೆ. ಪೊಲೀಸರು ಈ ಪ್ರಕರಣದಲ್ಲಿ ಮೊಕದ್ದಮೆ ದಾಖಲಿಸಿಕೊಂಡು ವೆಂಕಟೇಶ್‌ನನ್ನು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ಆರ್ಥಿಕ ವಿಚಾರಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದ್ದು, ಆರೋಪಿಯ ಮಾನಸಿಕ ಸ್ಥಿತಿಯನ್ನು ತಿಳಿಯಲು ಆತನ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ಪೊಲೀಸರ ಮಾಹಿತಿಯ ಪ್ರಕಾರ, ವೆಂಕಟೇಶ್ ವಿವಾಹಿತನಾಗಿದ್ದು ಪತ್ನಿ ಮತ್ತು ತಾಯಿಯೊಂದಿಗೆ ವಾಸಿಸುತ್ತಿದ್ದನು. ಆತ ಸಾವಿತ್ರಮ್ಮ ಅವರನ್ನು ಛಾವಣಿಯ ಮೇಲೆ ಕರೆದೊಯ್ದು ನಂತರ ಕೆಳಕ್ಕೆ ತಳ್ಳಿದ್ದನು. ಅಲ್ಲಿಂದ ಹೋಗುತ್ತಿದ್ದ ಜನರು ಈ ಘಟನೆಯನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಪಾದಕೀಯ ನಿಲುವು

ಸಮಾಜದ ಅಸಹಿಷ್ಣುತೆ ಎಷ್ಟು ಕೆಳಮಟ್ಟಕ್ಕೆ ತಲುಪಿದೆಯೆಂದರೆ, ಮಗನೇ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡುತ್ತಿದ್ದಾನೆ! ಸಮಾಜವು ಆಧ್ಯಾತ್ಮಿಕ ಸಂಸ್ಕಾರಗಳಿಂದ ವಂಚಿತವಾಗಿರುವುದರಿಂದಲೇ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದನ್ನು ತಿಳಿಯಿರಿ !