
ನವ ದೆಹಲಿ – ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರ ಮೀಸಲಾತಿ, ಹಾಗೂ ಮತಕ್ಷೇತ್ರಗಳ ಪುನರ್ವಿಂಗಡಣೆಗೆ ಸಂಬಂಧಿಸಿದ ‘ನಾರಿಶಕ್ತಿ ವಂದನ’ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಲು ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನವನ್ನು ಆಯೋಜಿಸಲಾಗಿದೆ. ಏಪ್ರಿಲ್ 16 ರಂದು, ಮೊದಲ ದಿನ ಈ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ ನಂತರ ಅದರ ಮೇಲೆ ಚರ್ಚೆ ಪ್ರಾರಂಭವಾಯಿತು. ಏಪ್ರಿಲ್ 17 ರಂದು ಈ ಬಗ್ಗೆ ಮತದಾನ ನಡೆಯಲಿದೆ. ಈ ತಿದ್ದುಪಡಿ ಮಸೂದೆಯಲ್ಲಿ ಲೋಕಸಭೆಯ ಸಂಸದರ ಸಂಖ್ಯೆಯನ್ನು 850 ಕ್ಕೆ ಹೆಚ್ಚಿಸುವ ಪ್ರಸ್ತಾಪವಿದೆ.
ಲೋಕಸಭೆಯಲ್ಲಿ ಚರ್ಚೆಯ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮೋದಿ ಮಾತನಾಡಿ, “ದೇಶದಲ್ಲಿ ಯಾವಾಗಲೆಲ್ಲಾ ಚುನಾವಣೆಗಳು ಬಂದಿವೆಯೋ, ಆಗ ಯಾರೆಲ್ಲಾ ಮಹಿಳೆಯರ ಈ ಹಕ್ಕನ್ನು ವಿರೋಧಿಸಿದ್ದಾರೋ, ಅವರಿಗೆ ಭಾರಿ ಹಿನ್ನಡೆಯಾಗಿದೆ. ಅವರಿಗೆ ಎಂದಿಗೂ ಕ್ಷಮೆ ಸಿಕ್ಕಿಲ್ಲ. ಯಾರಿಗೆ ಇದರಲ್ಲಿ ರಾಜಕೀಯದ ವಾಸನೆ ಬರುತ್ತದೆಯೋ, ಅವರು ತಮ್ಮ ಸ್ವಂತ ಪರಿಣಾಮಗಳ ಬಗ್ಗೆ ಯೋಚಿಸಲಿ. ಇದು ಕೇವಲ ಲಾಭದ ವಿಷಯವಲ್ಲ; ಇದರಿಂದ ಆಗುವ ಹಾನಿಯನ್ನು ಅವರು ತಪ್ಪಿಸಿಕೊಳ್ಳಲಿ. ಆದ್ದರಿಂದ, ಇದನ್ನು ರಾಜಕೀಯಗೊಳಿಸುವ ಅಗತ್ಯವಿಲ್ಲ. ಈ ದೇಶದ ಮಹಿಳೆಯರು ನಮ್ಮ ದೋಷಪೂರಿತ ಉದ್ದೇಶಗಳನ್ನು ಎಂದಿಗೂ ಕ್ಷಮಿಸುವುದಿಲ್ಲ,” ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ