
ನವ ದೆಹಲಿ – ಪೊಲೀಸರ ಅಪರಾಧ ವಿಭಾಗವು ಸರಿತಾ ವಿಹಾರ್ ಪ್ರದೇಶದಲ್ಲಿ ಏಪ್ರಿಲ್ ೧೫ ರ ರಾತ್ರಿ ಎನ್ಕೌಂಟರ್ ನಂತರ ೬ ಬಾಂಗ್ಲಾದೇಶಿ ದರೋಡೆಕೋರರನ್ನು ಬಂಧಿಸಿದೆ. ಈ ಪ್ರದೇಶದಲ್ಲಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ವಾಸಿಸುತ್ತಿದ್ದು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಸುಳಿವಿನ ಆಧಾರದ ಮೇಲೆ ಸುಲಿಗೆ ವಿರೋಧಿ ಮತ್ತು ಅಪಹರಣ ವಿರೋಧಿ ದಳವು ಸ್ಥಳಕ್ಕೆ ತಲುಪಿ ಆರೋಪಿಗಳನ್ನು ಸುತ್ತುವರಿಯಲು ಪ್ರಯತ್ನಿಸಿತು; ಆದರೆ ಆರೋಪಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ಮಾಡಲು ಆರಂಭಿಸಿದರು.

೧. ಮಾಧ್ಯಮಗಳ ವರದಿ ಪ್ರಕಾರ, ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದಾಗ ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದರು. ಈ ಎನ್ಕೌಂಟರ್ನಲ್ಲಿ ಯಾರೂ ಗಾಯಗೊಂಡಿಲ್ಲ.
೨. ಪೊಲೀಸರು ಸ್ಥಳದಲ್ಲಿಯೇ ಎಲ್ಲಾ ೬ ಆರೋಪಿಗಳನ್ನು ವಶಕ್ಕೆ ಪಡೆದರು. ಆರೋಪಿಗಳಿಂದ ಎರಡು ದೇಶಿ ಪಿಸ್ತೂಲ್ಗಳು, ಒಂದು ದೇಶಿ ಬಂದೂಕು, ೫ ಕಾರ್ಟ್ರಿಜ್ಗಳು ಮತ್ತು ಒಂದು ಚಾಕುವನ್ನು ವಶಪಡಿಸಿಕೊಳ್ಳಲಾಗಿದೆ.
೩. ಬಾಂಗ್ಲಾದೇಶಿ ದರೋಡೆಕೋರರ ವಿಚಾರಣೆ ನಡೆಯುತ್ತಿದ್ದು, ದೆಹಲಿಯಲ್ಲಿ ಎಂದಿನಿಂದ ವಾಸಿಸುತ್ತಿದ್ದರು, ಯಾವೆಲ್ಲಾ ಅಪರಾಧಗಳಲ್ಲಿ ಭಾಗಿಯಾಗಿದ್ದರು ಮತ್ತು ಅವರಿಗೆ ಯಾವುದೇ ದೊಡ್ಡ ಗ್ಯಾಂಗ್ ಅಥವಾ ಸ್ಥಳೀಯ ಜಾಲದೊಂದಿಗೆ ಸಂಬಂಧವಿದೆಯೇ, ಎಂಬುದರ ತನಿಖೆ ನಡೆಸಲಾಗುತ್ತಿದೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !