‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ದೇಶವ್ಯಾಪಿ ಸರಪಳಿಯನ್ನು ಬಯಲಿಗೆಳೆಯಲು ಆಗ್ರಹ

ಪುಣೆ – ನಾಸಿಕ್ ನ ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಹಿಂದೂ ಮಹಿಳಾ ಉದ್ಯೋಗಿಗಳ ಲೈಂಗಿಕ ಶೋಷಣೆ, ಮತಾಂತರಕ್ಕಾಗಿ ಒತ್ತಡ, ಗೋಮಾಂಸ ಭಕ್ಷಣೆಗೆ ಬಲವಂತ ಮತ್ತು ನಮಾಜ್ ದಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರ ಹಿಂದಿರುವ ವಿಷಕಾರಿ ಜಿಹಾದಿ ಮನಸ್ಥಿತಿ ಮತ್ತು ಸಂಘಟಿತ ಅಪರಾಧವನ್ನು ಹತ್ತಿಕ್ಕಬೇಕು. ಇದರ ಹಿಂದಿರುವ ‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ಬಗ್ಗೆ ಆಳವಾದ ತನಿಖೆ ನಡೆಸಿ, ಇದರ ದೇಶವ್ಯಾಪಿ ಕೊಂಡಿಯನ್ನು ಬಯಲಿಗೆಳೆಯಬೇಕು ಎಂಬ ಬೇಡಿಕೆಗಳಿಗಾಗಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಏಪ್ರಿಲ್ ೧೭ ರಂದು ಸಂಜೆ ೫.೩೦ ಕ್ಕೆ ‘ಹಿಂಜವಡಿ ಫೇಸ್ ೧’ ರ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಆಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಧರ್ಮಾಭಿಮಾನಿಗಳು ಭಾಗವಹಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದ ಮನವಿ ಕುರಿತು ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು. ಈ ಸಹಿಯುಳ್ಳ ಮನವಿಯನ್ನು ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಡಳಿತಕ್ಕೆ ನೀಡಲಾಗುವುದು ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಪರಾಗ ಗೋಖಲೆ ಅವರು ತಿಳಿಸಿದರು.
ಗೋರೆಗಾಂವ್: ಸರಕಾರಿ ಭೂಮಿಯಲ್ಲಿದ್ದ ಅಕ್ರಮ ದರ್ಗಾ ನೆಲಸಮ !
TMC Cut Money : ಬಂಗಾಳ: ಲಂಚದ ಹಣವನ್ನು ಜನರಿಗೆ ಹಿಂತಿರುಗಿಸುತ್ತಿರುವ ತೃಣಮೂಲ ಕಾಂಗ್ರೆಸ್ ನಾಯಕರು!
ಇಂದಿನಿಂದ ಕರ್ಣಾವತಿ (ಗುಜರಾತ್)ಯಲ್ಲಿ ಮೊದಲ ವಿಶ್ವ ಯೋಗಾಸನ ಸ್ಪರ್ಧೆ !
‘ಕಳ್ಳಭಟ್ಟಿಗಳನ್ನು ಅಧಿಕೃತಗೊಳಿಸಿದರೆ ಸರಕಾರಕ್ಕೆ ಆದಾಯ ಸಿಗುತ್ತದೆ !’(ಅಂತೆ)
ಗೋಪಾಲಗಡ ಸರಕಾರದ್ದಾಗಿದ್ದು ಎಲ್ಲರಿಗೂ ಮುಕ್ತವಾಗಿದೆ : ವದಂತಿಗಳನ್ನು ನಂಬಿ ಕಾನೂನನ್ನು ಕೈಗೆತ್ತಿಕೊಳ್ಳಬೇಡಿ !
ಪಾಟಲಿಪುತ್ರ (ಬಿಹಾರ) ಇಲ್ಲಿ ಪ್ರಸಿದ್ಧ ಖಾನ್ ಸರ್ ಅವರ ತರಬೇತಿ ಕೇಂದ್ರದ ಮೇಲೆ ದಾಳಿ