‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ದೇಶವ್ಯಾಪಿ ಸರಪಳಿಯನ್ನು ಬಯಲಿಗೆಳೆಯಲು ಆಗ್ರಹ

ಪುಣೆ – ನಾಸಿಕ್ ನ ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಹಿಂದೂ ಮಹಿಳಾ ಉದ್ಯೋಗಿಗಳ ಲೈಂಗಿಕ ಶೋಷಣೆ, ಮತಾಂತರಕ್ಕಾಗಿ ಒತ್ತಡ, ಗೋಮಾಂಸ ಭಕ್ಷಣೆಗೆ ಬಲವಂತ ಮತ್ತು ನಮಾಜ್ ದಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರ ಹಿಂದಿರುವ ವಿಷಕಾರಿ ಜಿಹಾದಿ ಮನಸ್ಥಿತಿ ಮತ್ತು ಸಂಘಟಿತ ಅಪರಾಧವನ್ನು ಹತ್ತಿಕ್ಕಬೇಕು. ಇದರ ಹಿಂದಿರುವ ‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ಬಗ್ಗೆ ಆಳವಾದ ತನಿಖೆ ನಡೆಸಿ, ಇದರ ದೇಶವ್ಯಾಪಿ ಕೊಂಡಿಯನ್ನು ಬಯಲಿಗೆಳೆಯಬೇಕು ಎಂಬ ಬೇಡಿಕೆಗಳಿಗಾಗಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಏಪ್ರಿಲ್ ೧೭ ರಂದು ಸಂಜೆ ೫.೩೦ ಕ್ಕೆ ‘ಹಿಂಜವಡಿ ಫೇಸ್ ೧’ ರ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಆಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಧರ್ಮಾಭಿಮಾನಿಗಳು ಭಾಗವಹಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದ ಮನವಿ ಕುರಿತು ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು. ಈ ಸಹಿಯುಳ್ಳ ಮನವಿಯನ್ನು ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಡಳಿತಕ್ಕೆ ನೀಡಲಾಗುವುದು ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಪರಾಗ ಗೋಖಲೆ ಅವರು ತಿಳಿಸಿದರು.
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
ಹಸುವನ್ನು ರಾಷ್ಟ್ರಮಾತೆ ಎಂದು ಘೋಷಿಸಿ! – ಪೂ. ಕಿಶೋರ್ಶಾಸ್ತ್ರಿ ದವೆ : Declare Cow Mother of Nation
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ
ಮಹಾರಾಷ್ಟ್ರದಲ್ಲಿ ಸಮಾನ ನಾಗರಿಕ ಸಂಹಿತೆಯ ಕರಡು ಸಿದ್ದಪಡಿಸಲಾಗುವುದು! – ಯೋಗೇಶ್ ಕದಮ್, ಗೃಹ ರಾಜ್ಯ ಸಚಿವರು, ಮಹಾರಾಷ್ಟ್ರ
‘ತ್ರಿವಳಿ ತಲಾಖ್’ ಮತ್ತು ‘ಬಹುಪತ್ನಿತ್ವ’ದ ವಿಷಯವಾಗಿ ಮಹಾರಾಷ್ಟ್ರದ ವಿಧಾನಸಭೆಯಲ್ಲಿ ಗದ್ದಲ