‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ದೇಶವ್ಯಾಪಿ ಸರಪಳಿಯನ್ನು ಬಯಲಿಗೆಳೆಯಲು ಆಗ್ರಹ

ಪುಣೆ – ನಾಸಿಕ್ ನ ಬಹುರಾಷ್ಟ್ರೀಯ ಸಂಸ್ಥೆಯೊಂದರಲ್ಲಿ ಹಿಂದೂ ಮಹಿಳಾ ಉದ್ಯೋಗಿಗಳ ಲೈಂಗಿಕ ಶೋಷಣೆ, ಮತಾಂತರಕ್ಕಾಗಿ ಒತ್ತಡ, ಗೋಮಾಂಸ ಭಕ್ಷಣೆಗೆ ಬಲವಂತ ಮತ್ತು ನಮಾಜ್ ದಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರ ಹಿಂದಿರುವ ವಿಷಕಾರಿ ಜಿಹಾದಿ ಮನಸ್ಥಿತಿ ಮತ್ತು ಸಂಘಟಿತ ಅಪರಾಧವನ್ನು ಹತ್ತಿಕ್ಕಬೇಕು. ಇದರ ಹಿಂದಿರುವ ‘ಲವ್ ಜಿಹಾದ್’, ‘ಧಾರ್ಮಿಕ ಭಯೋತ್ಪಾದನೆ’ ಮತ್ತು ‘ಮತಾಂತರ ಜಾಲ’ದ ಬಗ್ಗೆ ಆಳವಾದ ತನಿಖೆ ನಡೆಸಿ, ಇದರ ದೇಶವ್ಯಾಪಿ ಕೊಂಡಿಯನ್ನು ಬಯಲಿಗೆಳೆಯಬೇಕು ಎಂಬ ಬೇಡಿಕೆಗಳಿಗಾಗಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಏಪ್ರಿಲ್ ೧೭ ರಂದು ಸಂಜೆ ೫.೩೦ ಕ್ಕೆ ‘ಹಿಂಜವಡಿ ಫೇಸ್ ೧’ ರ ಛತ್ರಪತಿ ಶಿವಾಜಿ ಮಹಾರಾಜ್ ವೃತ್ತದಲ್ಲಿ ಹಿಂದೂ ರಾಷ್ಟ್ರ-ಜಾಗೃತಿ ಆಂದೋಲನ ನಡೆಸಲಾಯಿತು. ಈ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಧರ್ಮಾಭಿಮಾನಿಗಳು ಭಾಗವಹಿಸಿದ್ದರು.

ಈ ವಿಷಯಕ್ಕೆ ಸಂಬಂಧಿಸಿದ ಮನವಿ ಕುರಿತು ಸಾರ್ವಜನಿಕರಿಂದ ಸಹಿ ಸಂಗ್ರಹಿಸಲಾಯಿತು. ಈ ಸಹಿಯುಳ್ಳ ಮನವಿಯನ್ನು ಮುಖ್ಯಮಂತ್ರಿಗಳು, ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಆಡಳಿತಕ್ಕೆ ನೀಡಲಾಗುವುದು ಎಂದು ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಪರಾಗ ಗೋಖಲೆ ಅವರು ತಿಳಿಸಿದರು.
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”