(‘ವಿಶು’ ಹಬ್ಬ ಎಂದರೆ ಮಲಯಾಳಿ ಬಾಂಧವರ ಹೊಸ ವರ್ಷ) (ಚಿಕನ್ ಮಂದಿ ಎಂದರೆ ರಸಭರಿತ ಕೋಳಿ ಮಾಂಸ ಮತ್ತು ಅನ್ನದ ಮಿಶ್ರಣ)

(ಈ ಮೇಲೆ ಪ್ರಕಟಿಸಿರುವ ಚಿತ್ರ ಯಾರ ಧಾರ್ಮಿಕ ಭಾವನೆಗಳಿಗೆ ನೋವನ್ನು ತರುವುದಾಗಿರದೇ ನೈಜ ಸ್ಥಿತಿ ತಿಳಿಸುಉವದಾಗಿದೆ – ಸಂಪಾದಕರು)
ಕೊಚ್ಚಿ (ಕೇರಳ) – ಕೇರಳದ ಆಲಪ್ಪುಳ ಜಿಲ್ಲೆಯ ಚೇರ್ತಲಾದಲ್ಲಿ ‘ವಿಶು’ ಹಬ್ಬದ ಶುಭಾಶಯ ಕೋರುವ ಫಲಕದಲ್ಲಿ ಶ್ರೀಕೃಷ್ಣನ ಚಿತ್ರದ ಮುಂದೆ ‘ಚಿಕನ್ ಮಂದಿ’ಯ (ರಸಭರಿತ ಕೋಳಿ ಮಾಂಸ ಮತ್ತು ಅನ್ನದ ಮಿಶ್ರಣ) ತಟ್ಟೆಯನ್ನು ತೋರಿಸಿದ ಆರೋಪದ ಮೇಲೆ ಪೊಲೀಸರು ರೆಸ್ಟೋರೆಂಟ್ ನ ಮುಸ್ಲಿಂ ಮಾಲೀಕನನ್ನು ಬಂಧಿಸಿದ್ದಾರೆ. ಮಲಯಾಳಿ ಬಾಂಧವರ ಹೊಸ ವರ್ಷವಾದ ‘ವಿಶು’ ನಿಮಿತ್ತ ಚೇರ್ತಲಾದ ಮನೋರಮಾ ಚೌಕದ ಬಳಿ ಇರುವ ‘ಮೆಹರ್ ಮಂದಿ ಅಂಡ್ ಗ್ರಿಲ್ಸ್’ ಎಂಬ ರೆಸ್ಟೋರೆಂಟ್ ಹೆಸರಿನಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ಫಲಕವನ್ನು ಪ್ರಸಾರ ಮಾಡಲಾಗಿತ್ತು. ಈ ಫಲಕದಲ್ಲಿ ಶ್ರೀಕೃಷ್ಣನ ಚಿತ್ರದ ಮುಂದೆ ಚಿಕನ್ ಮತ್ತು ಮಂದಿ (ಅನ್ನ) ಇರುವ ತಟ್ಟೆಯನ್ನು ತೋರಿಸಲಾಗಿತ್ತು. ಈ ಚಿತ್ರದಿಂದ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ನ್ಯಾಯವಾದಿ ಎಂ.ವಿ. ಬಿಜು ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ರೆಸ್ಟೋರೆಂಟ್ ಮಾಲೀಕ ಅರ್ಷದ್ ವಿರುದ್ಧ ಮೊಕದ್ದಮೆ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ವಿಶ್ವ ಹಿಂದೂ ಪರಿಷತ್ ರೆಸ್ಟೋರೆಂಟ್ ಹೊರಗೆ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದೆ.
ಈ ವಿಷಯದ ಕುರಿತು ವಿವಾದ ಹೆಚ್ಚಾದ ನಂತರ ರೆಸ್ಟೋರೆಂಟ್ ನ ವ್ಯವಸ್ಥಾಪಕ ಪಾಲುದಾರ ಶಮೀಮ್ ಇನ್ ಸ್ಟಾಗ್ರಾಮ್ ನಲ್ಲಿ ಬೇಷರತ್ ಕ್ಷಮೆಯಾಚಿಸಿದ್ದಾರೆ. ಕೇರಳದ ಪ್ರಖ್ಯಾತ ಮುಸ್ಲಿಂ ಮುಖಂಡ ಉಸ್ತಾದ್ ಅನ್ಸಾರಿ ಸುಹ್ರಿ ಅವರು ಫೇಸ್ಬುಕ್ ವಿಡಿಯೋ ಮೂಲಕ ಈ ಘಟನೆಯನ್ನು ಖಂಡಿಸಿದ್ದಾರೆ. ‘ನೀವು ವಿಶು ಹಬ್ಬದ ಶುಭಾಶಯಗಳನ್ನು ತಿಳಿಸಲೇಬೇಕು ಎಂದೇನಿಲ್ಲ; ಆದರೆ ಶುಭಾಶಯಗಳ ಹೆಸರಿನಲ್ಲಿ ಕೋಮು ದ್ವೇಷವನ್ನು ಹರಡಬೇಡಿ. ಇಂತಹ ಕೃತ್ಯಗಳಿಂದ ಸಮಾಜದಲ್ಲಿ ಅಶಾಂತಿ ನಿರ್ಮಾಣವಾಗುತ್ತದೆ. ಕೆಲವು ತಪ್ಪುಗಳು ಮನುಷ್ಯನಿಗೆ ಜೀವಕ್ಕೆ ಎರವಾಗಬಹುದು,’ ಎಂದು ಅವರು ಎಚ್ಚರಿಸಿದ್ದಾರೆ.
ಮಹಿಳಾ ಸದಸ್ಯರ ಸಮಿತಿಯ ಮೂಲಕ ಲೈಂಗಿಕ ಶೋಷಣೆ ವಿರೋಧಿ ಕಾಯ್ದೆಗಳ ಮರುಪರಿಶೀಲನೆ ನಡೆಸಬೇಕು!
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ದೇವಸ್ಥಾನದ ಹಣವನ್ನು ಧಾರ್ಮಿಕ ಕಾರ್ಯಗಳಿಗಾಗಿಯೇ ಖರ್ಚು ಮಾಡುವ ತಮಿಳುನಾಡು ಸರಕಾರದ ನೀತಿಯನ್ನು ಟೀಕಿಸಿದ ಹಿಂದೂದ್ವೇಷಿ ಉದಯನಿಧಿ ಸ್ಟಾಲಿನ್
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಮಹಾರಾಷ್ಟ್ರ : ಅಕೋಲಾ ಮಹಾನಗರ ಪಾಲಿಕೆಯ ಸ್ಥಾಯಿ ಸಮಿತಿ ಸಭಾಂಗಣಕ್ಕೆ ನೀಡಲಾದ ‘ಟಿಪ್ಪು ಸುಲ್ತಾನ್’ ಹೆಸರು ಅಕ್ರಮ!
ಮಹಾರಾಷ್ಟ್ರ : ದೇವಸ್ಥಾನ ಭೂಮಿಗೆ ಸಂಬಂಧಿಸಿದಂತೆ ಸರಕಾರಿ ದೇವಸ್ಥಾನ ಸಮಿತಿಯ ಮೊದಲ ಸಭೆ ಮುಕ್ತಾಯ!