
ಇಂಫಾಲ (ಮಣಿಪುರ) – ಇಲ್ಲಿನ ಉಖರುಲ್ ಜಿಲ್ಲೆಯಲ್ಲಿ ಏಪ್ರಿಲ್ ೧೮ ರಂದು ಮಧ್ಯಾಹ್ನ ೨:೩೦ ರ ಸುಮಾರಿಗೆ ನಿವೃತ್ತ ಸೇನಾ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತರನ್ನು ಎಸ್.ಡಬ್ಲ್ಯೂ. ಚಿನಾವೋಷಾಂಗ್ ಮತ್ತು ಯರುಯಿಂಗಮ್ ವಾಶುಮ್ ಎಂದು ಗುರುತಿಸಲಾಗಿದ್ದು, ಇವರಿಬ್ಬರು ಇಂಫಾಲದಿಂದ ಉಖರುಲ್ಗೆ ಹೋಗುತ್ತಿದ್ದಾಗ ಪ್ರತ್ಯೇಕತಾವಾದಿಗಳು ಅವರ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಈ ಘಟನೆಯಲ್ಲಿ ಕುಕಿ ಸಮುದಾಯದ ಯಾವುದೇ ಕೈವಾಡವಿಲ್ಲ ಎಂದು ‘ಕುಕಿ ಜೋ ಕೌನ್ಸಿಲ್’ ಹೇಳಿದ್ದರೆ, ‘ತಂಗ್ಖುಲ್ ನಾಗಾ ಲಾಂಗ್’ನ ಕಾರ್ಯಕಾರಿ ಸಮಿತಿಯು ಈ ಘಟನೆಯನ್ನು ಖಂಡಿಸಿ, ‘ಈ ದಾಳಿಯನ್ನು ಕುಕಿ ಸಮುದಾಯವೇ ಮಾಡಿದೆ’ ಎಂದು ಆರೋಪಿಸಿದೆ.
ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿದೆ. ಭದ್ರತಾ ಪಡೆಗಳು ದಾಳಿಕೋರರಿಗಾಗಿ ಶೋಧ ನಡೆಸುತ್ತಿವೆ. ಈ ಘಟನೆ ನಡೆಯುವ ಒಂದು ದಿನ ಮುಂಚೆಯೇ ಮುಖ್ಯಮಂತ್ರಿ ಯುಮ್ನಮ್ ಖೇಮಚಂದ್ ಸಿಂಗ್ ಅವರು ಉಖರುಲ್ಗೆ ಭೇಟಿ ನೀಡಿದ್ದರು ಮತ್ತು ಕುಕಿ ಮತ್ತು ನಾಗಾ ಸಮುದಾಯಗಳಿಗೆ ಶಾಂತಿಯನ್ನು ಕಾಪಾಡುವಂತೆ ಮನವಿ ಮಾಡಿದ್ದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ