ಧಂಧುಕಾ (ಗುಜರಾತ) ಇಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮುಸ್ಲಿಮರಿಂದ ಹಿಂದೂ ಯುವಕನ ಹತ್ಯೆ

  • ಆಕ್ರೋಶಗೊಂಡ ಜನಸಮೂಹದಿಂದ ಹಿಂಸಾತ್ಮಕ ಪ್ರತಿಭಟನೆ

  • ವಾಹನಗಳು ಮತ್ತು ಅಂಗಡಿಗಳಿಗೆ ಬೆಂಕಿ

ಕರ್ಣಾವತಿ (ಗುಜರಾತ) – ರಾಜ್ಯದ ಧಂಧುಕಾದಲ್ಲಿ ಧರ್ಮೇಶ ಗಾಮರಾ ಎಂಬ ಹಿಂದೂ ಯುವಕನೊಂದಿಗೆ ದ್ವಿಚಕ್ರ ವಾಹನಕ್ಕೆ ಸಂಬಂಧಿಸಿದಂತೆ ನಡೆದ ಜಗಳದಿಂದಾಗಿ, ಮುಸ್ಲಿಮರು ಆತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಇದರ ನಂತರ, ಆಕ್ರೋಶಗೊಂಡ ಜನಸಮೂಹವು ಈ ಹತ್ಯೆಯನ್ನು ಪ್ರತಿಭಟಿಸಿ ಹಿಂಸಾತ್ಮಕ ಆಂದೋಲನ ನಡೆಸಿತು. ಈ ಸಂದರ್ಭದಲ್ಲಿ ಎರಡೂ ಕಡೆಯವರು ಪರಸ್ಪರ ಕಲ್ಲು ತೂರಾಟ ನಡೆಸಿದರು. ಹಲವು ಕಡೆ ವಾಹನಗಳು ಮತ್ತು ಅಂಗಡಿಗಳಿಗೆ ಬೆಂಕಿ ಹಚ್ಚಲಾಯಿತು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡಬೇಕಾಯಿತು. ಪ್ರಸ್ತುತ ಇಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ. ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ನಾಗರಿಕರಿಗೆ ಶಾಂತಿ ಕಾಪಾಡುವಂತೆ ಮನವಿ ಮಾಡಲಾಗುತ್ತಿದೆ. ಪೊಲೀಸರು ಧರ್ಮೇಶನ ಹಂತಕ ಮುಸಲ್ಮಾನನನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇತರ ಶಂಕಿತರ ಪತ್ತೆಗಾಗಿ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸಂಪಾದಕೀಯ ನಿಲುವು

ಕಳೆದ 3 ದಶಕಗಳಿಂದ ಗುಜರಾತನಲ್ಲಿ ಭಾಜಪ ಸರಕಾರವಿದ್ದರೂ, ಮತಾಂಧ ಮುಸ್ಲಿಮರಿಗೆ ಹಿಂದೂಗಳನ್ನು ಹತ್ಯೆ ಮಾಡುವ ಧೈರ್ಯ ಹೇಗೆ ಬರುತ್ತದೆ? ಎಂಬ ಪ್ರಶ್ನೆ ಹಿಂದೂಗಳ ಮನಸ್ಸಿನಲ್ಲಿ ಮೂಡುತ್ತಿದೆ!