ಮುಜಫರ್ನಗರ (ಉತ್ತರ ಪ್ರದೇಶ) ಇಲ್ಲಿನ ಘಟನೆ

ಮುಜಫರ್ನಗರ (ಉತ್ತರ ಪ್ರದೇಶ) – ಇಲ್ಲಿ ಓರ್ವ ಹಿಂದೂ ಯುವಕನನ್ನು ಬಲವಂತವಾಗಿ ಮತಾಂತರ ಮಾಡಿ, ಅವನಿಗೆ ನಮಾಜ್ ಪಠಿಸಲು ಒತ್ತಾಯಿಸಿದ ಮತ್ತು ಗೋಮಾಂಸ ತಿನ್ನಿಸಿದ ಪ್ರಕರಣದಲ್ಲಿ ಪೊಲೀಸರು ಅಫ್ಸರ್ ಹೆಸರಿನ ಮುಸಲ್ಮಾನ ಯುವಕನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗಿರುವ ಒಂದು ವಿಡಿಯೋದಲ್ಲಿ, ಸಂಬಂಧಪಟ್ಟ ಯುವಕನು ನಮಾಜ್ ಪಠಿಸುತ್ತಿರುವುದು ಮತ್ತು ವಜೂ (ನಮಾಜ್ಗೂ ಮುನ್ನ ಕೈಕಾಲುಗಳನ್ನು ತೊಳೆಯುವುದು) ಮಾಡುತ್ತಿರುವುದು ಕಂಡುಬರುತ್ತಿದೆ. ಈ ಘಟನೆಯು ಭೈಕಾರೇಡಿ ಗ್ರಾಮದಲ್ಲಿ ನಡೆದಿದೆ. ಹರಿದ್ವಾರದ ನಿವಾಸಿಯಾದ ರಾಕೇಶ್ ಶರ್ಮಾ ಎಂಬಾತನನ್ನು ಆರೋಪಿ ಅಫ್ಸರ್ ೧೫ ವರ್ಷಗಳ ಹಿಂದೆ ತನ್ನ ಮನೆಗೆ ಕರೆದುಕೊಂಡು ಬಂದಿದ್ದನು ಮತ್ತು ಅವನಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದನು. ಅಫ್ಸರ್ ಮತ್ತು ಅವನ ಕುಟುಂಬದವರು ರಾಕೇಶ್ನಿಗೆ ಥಳಿಸಿ, ಆನಂತರ ಅವನನ್ನು ಮತಾಂತರ ಮಾಡಿದರು. ಅವನಿಂದ ನಮಾಜ್ ಮಾಡಿಸಿದರು. ಇದರ ವಿಡಿಯೋ ಹೊರಬಂದ ನಂತರ ಹಿಂದೂ ಸಂಘರ್ಷ ಸಮಿತಿಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭೋಪಾ ಪೊಲೀಸ್ ಠಾಣೆಗೆ ತಲುಪಿ ಪೊಲೀಸರಿಗೆ ಮುತ್ತಿಗೆ ಹಾಕಿದರು. ಆನಂತರ ಪೊಲೀಸರು ಅಫ್ಸರ್ನನ್ನು ಬಂಧಿಸಿದರು.
‘ಜೀವೋತ್ತಮ ವಿದ್ಯಾಪೀಠಂ’ ಸನಾತನ ಧರ್ಮದ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ! – ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ ದೂರು ದಾಖಲು : ಇಬ್ಬರ ಬಂಧನ