
ಹುಬ್ಬಳ್ಳಿ (ಕರ್ನಾಟಕ): ಇಲ್ಲಿನ ವಿದ್ಯಾನಗರ ಪ್ರದೇಶದಲ್ಲಿ ಪ್ರೀತಿಯ ಹೆಸರಿನಲ್ಲಿ ಹಿಂದೂ ಯುವತಿಯೊಬ್ಬಳಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಮುಸ್ಲಿಂ ಯುವಕನಿಗೆ ಸಂತ್ರಸ್ತ ಯುವತಿ ಮತ್ತು ಆಕೆಯ ಪೋಷಕರು ಧರ್ಮದೇಟು ನೀಡಿದ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾನಗರ ಭಾಗದ ‘ಬಿಗ್ ಬಾಸ್’ ಹೆಸರಿನ ಸಲೂನ್ನಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಯುವಕನು ಹಿಂದೂ ಯುವತಿಯನ್ನು ಪ್ರೇಮದ ಜಾಲದಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಿದ್ದನು. ‘ನನ್ನನ್ನು ಪ್ರೀತಿಸು’ ಎಂದು ಆಕೆಗೆ ಪೀಡಿಸುತ್ತಿದ್ದನು. ಅಲ್ಲದೆ ಆಕೆಯನ್ನು ಹಿಂಬಾಲಿಸಿ ಸತಾಯಿಸುತ್ತಿದ್ದನು. ಯುವಕನ ಈ ಅತಿರೇಕದ ವರ್ತನೆಯಿಂದ ಬೇಸತ್ತ ಸಂತ್ರಸ್ತೆ ಈ ವಿಷಯವನ್ನು ತನ್ನ ಪೋಷಕರ ಗಮನಕ್ಕೆ ತಂದಳು.
ಸಂತ್ರಸ್ತ ಯುವತಿಯು ತನ್ನ ಪೋಷಕರೊಂದಿಗೆ ಆರೋಪಿ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಹೋಗಿ ಮಾನಸಿಕ ಕಿರುಕುಳದ ಬಗ್ಗೆ ಪ್ರಶ್ನಿಸಿದಳು. ಈ ವೇಳೆ ಆರೋಪಿ ಯುವಕನು ಉದ್ಧಟತನದಿಂದ ವರ್ತಿಸಿ ಅವರೊಂದಿಗೆ ಜಗಳವಾಡಿದನು. ಇದರಿಂದ ಆಕ್ರೋಶಗೊಂಡ ಯುವತಿ ಮತ್ತು ಪೋಷಕರು ಆರೋಪಿಯನ್ನು ಥಳಿಸಿದರು.
🚩Hubballi (Karnataka): Hindu Girl and Her Parents Confront Salon Worker who tried to Lure Her into a “Love Trap”
Looking at the increasing incidents of “Love Jihad” across the country and the perceived inaction of various state governments, police, and administration… pic.twitter.com/7CPJ0sMyGh
— Sanatan Prabhat (@SanatanPrabhat) April 20, 2026
ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ವಿದ್ಯಾನಗರ ಪೊಲೀಸರು ಸ್ಥಳಕ್ಕೆ ಧಾವಿಸಿದರು. ಸಂತ್ರಸ್ತ ಯುವತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ವಶಕ್ಕೆ ಪಡೆದರು. ಸದ್ಯ ಪೊಲೀಸರು ಈ ಪ್ರಕರಣದ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!