ಪ್ರಾಚೀನ ಶಿವಮಂದಿರದ ಆವರಣದಲ್ಲಿ ಮಾಂಸದ ತುಂಡುಗಳನ್ನು ಎಸೆದ ಮಹಿಳೆಯನ್ನು ಕುಟುಂಬ ಸಹಿತ ವಶಕ್ಕೆ ಪಡೆದ ಪೊಲೀಸರು

ಮಹಾರಾಜಗಂಜ್ (ಉತ್ತರ ಪ್ರದೇಶ) – ಇಲ್ಲಿನ ಖೋರಿಯಾ ಬಜಾರ್ ಪ್ರದೇಶದಲ್ಲಿರುವ ಒಂದು ಪ್ರಾಚೀನ ಶಿವಮಂದಿರದಲ್ಲಿ ಮಾಂಸದ ತುಂಡುಗಳನ್ನು ಎಸೆದ ಘಟನೆಯಿಂದಾಗಿ ಉದ್ವಿಗ್ನತೆ ಉಂಟಾಗಿತ್ತು. ಪೊಲೀಸರು ತಕ್ಷಣ ಕ್ರಮ ಕೈಗೊಂಡು ಆರೋಪಿ ಮಹಿಳೆ ಮತ್ತು ಆಕೆಯ ಕುಟುಂಬದವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

ಸದ್ಯ ಮಂದಿರದ ಆವರಣ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶಾಂತಿ ಕಾಪಾಡಲು ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದ್ದು, ಪರಿಸ್ಥಿತಿಯು ಸಂಪೂರ್ಣ ನಿಯಂತ್ರಣದಲ್ಲಿದೆ. ಈ ಘಟನೆಯು ಏಪ್ರಿಲ್ ೧೯ ರ ಭಾನುವಾರ ರಾತ್ರಿ ೮:೩೦ ಕ್ಕೆ ನಡೆದಿದೆ.

ಸಂಪಾದಕೀಯ ನಿಲುವು

ಇಂತಹ ಕೃತ್ಯಗಳನ್ನು ಎಸಗುವವರಿಗೆ ಈಗ ಗಲ್ಲು ಶಿಕ್ಷೆಯೇ ಆಗುವಂತೆ ಸರಕಾರವು ಕಾನೂನು ರೂಪಿಸುವುದು ಅವಶ್ಯಕವಾಗಿದೆ!