G.Parmeshwara Betting Case : ರಾಜ್ಯದ ಕಾಂಗ್ರೆಸ್ ಸರಕಾರದ ಗೃಹ ಸಚಿವ ಪರಮೇಶ್ವರ ವಿರುದ್ಧ ದೂರು ದಾಖಲಿಸಲು ನ್ಯಾಯಾಲಯ ಆದೇಶ

ಎಡದಿಂದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮತ್ತು ಗೃಹ ಸಚಿವ ಪರಮೇಶ್ವರ

ಬೆಂಗಳೂರು – ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ ವಿರುದ್ಧ ಜೂಜಾಟ ಪ್ರಕರಣದಲ್ಲಿ ದೂರು ದಾಖಲಿಸಿ ತನಿಖೆ ನಡೆಸಲು ಆದೇಶಿಸಿದೆ. ಈ ಆದೇಶವನ್ನು ತುಮಕೂರಿನ ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ನೀಡಲಾಗಿದೆ.

2025 ರಲ್ಲಿ ತುಮಕೂರಿನಲ್ಲಿ ನಡೆದ ಪಿಯು ಕಾಲೇಜು ವಿದ್ಯಾರ್ಥಿಗಳ ಕಬಡ್ಡಿ ಪಂದ್ಯದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರೊಂದಿಗೆ 500 ರೂ. ಬೆಟ್ಟಿಂಗ್ ನಡೆಸಿರುವುದಾಗಿ ಪರಮೇಶ್ವರ ಹೇಳಿದ್ದರು. ವಿಜೇತ ತಂಡಕ್ಕೆ ಬಹುಮಾನ ನೀಡುವ ಸಂದರ್ಭದಲ್ಲಿ ಸಚಿವರು ಸ್ವತಃ ಈ ಬಗ್ಗೆ ತಿಳಿಸಿದ್ದರು. ಅವರು ‘ಕೇವಲ ಮೋಜಿಗಾಗಿ’ ಬೆಟ್ಟಿಂಗ್ ನಡೆಸಿರುವುದಾಗಿ ವಿವರಿಸಿದ್ದರು. ಇದು ಕಾನೂನುಬಾಹಿರ ಎಂದು ಆರೋಪಿಸಿ ಎಚ್.ಆರ್. ನಾಗಭೂಷಣ್ ಖಾಸಗಿ ದೂರು ದಾಖಲಿಸಿದ್ದರು.

ಸಂಪಾದಕೀಯ ನಿಲುವು

ಗೃಹ ಸಚಿವರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಆದೇಶಿಸಬೇಕು; ಏಕೆಂದರೆ ಪೊಲೀಸರು ಅದನ್ನು ದಾಖಲಿಸುತ್ತಿರಲಿಲ್ಲ, ಬದಲಿಗೆ ದೂರುದಾರರನ್ನು ಜೈಲಿಗೆ ಹಾಕುತ್ತಿದ್ದರು!