ಭಾರತವು ಭಯೋತ್ಪಾದನೆಯ ಮುಂದೆ ಎಂದಿಗೂ ತಲೆಬಾಗುವುದಿಲ್ಲ ! – Prime Minister Narendra Modi

ಪಹಲ್ಗಾಮ್ ಭಯೋತ್ಪಾದನಾ ದಾಳಿಯ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಅವರ ನಿರ್ಧಾರ

ನವ ದೆಹಲಿ – ಕಳೆದ ವರ್ಷ ಇದೇ ದಿನದಂದು (22 ಏಪ್ರಿಲ್ 2025 ರಂದು) ಪಹಲ್ಗಾಮ್ ನಲ್ಲಿ ನಡೆದ ಭೀಕರ ಭಯೋತ್ಪಾದನಾ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ನಿರಪರಾಧಿ ಜೀವಗಳನ್ನು ನಾನು ಸ್ಮರಿಸುತ್ತೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದುಃಖದಿಂದ ಚೇತರಿಸಿಕೊಳ್ಳುತ್ತಿರುವ ಶೋಕತಪ್ತ ಕುಟುಂಬಗಳೊಂದಿಗೆ ನನ್ನ ಸಹಾನುಭೂತಿ ಇದೆ. ಒಂದು ರಾಷ್ಟ್ರವಾಗಿ ನಾವು ಈ ದುಃಖ ಮತ್ತು ಸಂಕಲ್ಪದಲ್ಲಿ ಒಟ್ಟಾಗಿ ನಿಂತಿದ್ದೇವೆ. ಭಾರತವು ಯಾವುದೇ ರೀತಿಯ ಭಯೋತ್ಪಾದನೆಯ ಮುಂದೆ ಎಂದಿಗೂ ತಲೆಬಾಗುವುದಿಲ್ಲ. ಭಯೋತ್ಪಾದಕರ ಕ್ರೂರ ಸಂಚುಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿ ನಿರ್ಧಾರವನ್ನು ವ್ಯಕ್ತಪಡಿಸಿದ್ದಾರೆ.